ತಮಿಳುನಾಡು: ಬೀದಿ ಕಾಮಣ್ಣರಿಂದ ತಪ್ಪಿಸಿಕೊಳ್ಳಲು ಓಡಿಹೋಗುತ್ತಿದ್ದ ಯುವತಿ ಕಾರಿಗೆ ಸಿಲುಕಿ ಸಾವು!

ತನ್ನೊಡನೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗಳಿಂದ ತಪ್ಪಿಸಿಕೊಳ್ಳಲು ಓಡಿಹೋಗಲು ಯತ್ನಿಸುತ್ತಿದ್ದ ವೇಳೆ 20 ವರ್ಷದ ಯುವತಿ ಕಾರಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಚೆನ್ನೈನ ತಿರುವಣ್ಣಾಮಲೈ ನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ವಿಲ್ಲುಪುರಂ: ತನ್ನೊಡನೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗಳಿಂದ ತಪ್ಪಿಸಿಕೊಳ್ಳಲು ಓಡಿಹೋಗಲು ಯತ್ನಿಸುತ್ತಿದ್ದ ವೇಳೆ 20 ವರ್ಷದ ಯುವತಿ ಕಾರಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಚೆನ್ನೈನ ತಿರುವಣ್ಣಾಮಲೈ ನಲ್ಲಿ ನಡೆದಿದೆ.

ಕೇರಳದ ತ್ರಿಶೂರ್‌ನ ಎಸ್‌ ಪವಿತ್ರಾ ಮೃತ ಯುವತಿ. ಶನಿವಾರ ನಸುಕಿನ ವೇಳೆ ಆಕೆ ತನ್ನ ಸಂಗಾತಿ ಪಿ ರಮೇಶ್ (21) ಜೊತೆ ಚೆನ್ನೈನ ಮಾಧವರಂನಿಂದ ತಿರುವಣ್ಣಾಮಲೈಗೆ ಪ್ರಯಾಣಿಸುತ್ತಿದ್ದಳು. ಪವಿತ್ರಾ ಚೆನ್ನೈನ ಜವಳಿ ಶೋರೂಂನಲ್ಲಿ ಕೆಲಸ ಮಾಡುತ್ತಿದ್ದು, ರಮೇಶ್ ನಗರದ ಕಾಲೇಜಿನಲ್ಲಿ ಪದವಿಪೂರ್ವ ವಿದ್ಯಾರ್ಥಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ರಮೇಶ್ ಹೇಳಿಕೆ ಪ್ರಕಾರ, ಶುಕ್ರವಾರ ರಾತ್ರಿ ಇಬ್ಬರೂ ತಿರುವಣ್ಣಾಮಲೈಗೆ ತೆರಳಿದ್ದರು. ಒಲಕ್ಕೂರು ಟೋಲ್‌ಗೇಟ್‌ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ನಮ್ಮನ್ನು ತಡೆದು, ಫೋನ್‌ ಕಸಿದುಕೊಂಡರು, ನಂತರ ಪವಿತ್ರಾ ಜೊತೆ ಅನುಚಿತವಾಗಿ ವರ್ತಿಸಲು ಯತ್ನಿಸಿದ್ದಾರೆ. ಅವರಿಂದ ತಪ್ಪಿಸಿಕೊಳ್ಳಲು ಪವಿತ್ರಾ ಓಡಿ ಹೋಗುತ್ತಿದ್ದ ಸಂದರ್ಭದಲ್ಲಿ ಕಾರಿಗೆ ಡಿಕ್ಕಿ ಹೊಡೆದಿದ್ದಾಳೆ. ಡಿಕ್ಕಿ ಹೊಡೆದ ಕಾರು ವೇಗವಾಗಿ ಹೊರಟು ಹೋಗಿದೆ. ಹಾಗೆಯೇ ಇಬ್ಬರು ಅಪರಿಚಿತ ವ್ಯಕ್ತಿಗಳು ಓಡಿ ಹೋದರು ಎಂದು ರಮೇಶ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಾಂದರ್ಭಿಕ ಚಿತ್ರ
ಗುಜರಾತ್'ನಲ್ಲಿ ಭೀಕರ ಅಪಘಾತ: ಬಸ್'ಗೆ ಸಿಮೆಂಟ್ ಟ್ಯಾಂಕರ್ ಡಿಕ್ಕಿ, ಇಬ್ಬರ ದುರ್ಮರಣ

ಘಟನೆಯ ಬಗ್ಗೆ ಅಧಿಕಾರಿಗಳು ಸಂಪೂರ್ಣ ತನಿಖೆ ಆರಂಭಿಸಿದ್ದು, ಉಪ ಐಜಿ ದಿಶಾ ಮಿತ್ತಲ್ ಮತ್ತು ಡಿಎಸ್ಪಿ ದೀಪಕ್ ಸಿವಾಚ್ ಅಪರಾಧ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ತನಿಖೆಗೆ ವಿಶೇಷ ತಂಡವನ್ನೂ ರಚಿಸಲಾಗಿದೆ.

ನಾವು ಇನ್ನೂ ಆರೋಪಿಗಳನ್ನು ಬಂಧಿಸಿಲ್ಲ. ರಮೇಶ್ ಹೇಳಿಕೆಯ ಬಗ್ಗೆ ನಮ್ಮ ತನಿಖೆಯು ಪ್ರಸ್ತುತ ನಡೆಯುತ್ತಿದೆ, ಏಕೆಂದರೆ ನಮಗೆ ಆತನ ಹೇಳಿಕೆಗಳ ಬಗ್ಗೆ ಅನುಮಾನಗಳಿವೆ. ಒಂದೆರೆಡು ದಿನಗಳಲ್ಲಿ ವಿಷಯ ತಿಳಿಯಲಿದೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com