ಪಶ್ಚಿಮ ಬಂಗಾಳದಲ್ಲಿ ಗುಂಡಿಕ್ಕಿ ಟಿಎಂಸಿ ಮುಖಂಡನ ಹತ್ಯೆ!

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಅಶೋಕನಗರದಲ್ಲಿ 49 ವರ್ಷ ವಯಸ್ಸಿನ ತೃಣಮೂಲ ಕಾಂಗ್ರೆಸ್ ಮುಖಂಡರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಅಶೋಕನಗರದಲ್ಲಿ 49 ವರ್ಷ ವಯಸ್ಸಿನ ತೃಣಮೂಲ ಕಾಂಗ್ರೆಸ್ ಮುಖಂಡರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ವಾಗ್ವಾದದ ನಂತರ ಗುಂಪೊಂದು ಗುಂಡಿಕ್ಕಿ ಹತ್ಯೆ ಮಾಡಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮೃತನನ್ನು ಟಿಎಂಸಿ ನಾಯಕ ಬಿಜನ್ ದಾಸ್ ಎಂದು ಗುರುತಿಸಲಾಗಿದ್ದು, ಅವರು ಪಕ್ಷದ ಸಹೋದ್ಯೋಗಿಯ ಮನೆಗೆ ಹೋದಾಗ ಹತ್ಯೆಯಾಗಿದ್ದಾರೆ. ಗುಮಾ 1 ಪಂಚಾಯತ್‌ನ ಉಪ ಮುಖ್ಯಸ್ಥರಾಗಿದ್ದ ದಾಸ್ ಅವರಿಗೆ ಎರಡು ಬಾರಿ ಗುಂಡು ಹಾರಿಸಲಾಗಿದೆ. ಈ ಪೈಕಿ ಒಂದು ಗುಂಡು ಅವರ ತಲೆಗೆ ಹೊಡೆದಿದ್ದು, ಇನ್ನೊಂದು ಅವರ ಎಡಕಿವಿ ಮೂಲಕ ಹೊರಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಕೋಲ್ಕತ್ತಾಗೆ ತೆರಳುತ್ತಿದ್ದಾಗ ಕಾರು ಅಪಘಾತ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಲೆಗೆ ಗಾಯ

ದಾಸ್ ಅವರನ್ನು ಬರಾಸತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದು, ಈ ಪ್ರಕರಣ ಕುರಿತು ತನಿಖೆ ಮಾಡುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಆಸ್ಪತ್ರೆಗೆ ತೆರಳಿದ ಬರಾಸತ್ ಸಂಸದ ಕಾಕಲಿ ಘೋಷ್ ದಸ್ತಿದಾರ್, ಇದೊಂದು ದುರಂತ ಘಟನೆ ಎಂದು ಹೇಳಿದ್ದಾರೆ.

"ಬಿಜನ್ ಅವರ ಸಾವು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರು ವಿದ್ಯಾರ್ಥಿ ದೆಸೆಯಿಂದಲೂ ಪಕ್ಷದಲ್ಲಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಘೋಷ್ ದಸ್ತಿದಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com