ಶಿಮ್ಲಾ: ರಾಜ್ಯಸಭೆಗೆ ಇಂದು ಚುನಾವಣೆ ನಡೆದಿದ್ದು ಹಿಮಾಚಲ ಪ್ರದೇಶದಲ್ಲಿ ಅಡ್ಡಮತದಾನದ ವರದಿಯಾಗಿದೆ. ಅಡ್ಡಮತದಾನದ ಪರಿಣಾಮ ಅಭಿಷೇಕ್ ಮನು ಸಿಂಘ್ವಿ ಸೋಲು ಕಂಡಿದ್ದಾರೆ. ಸಿಂಘ್ವಿ ವಿರುದ್ಧ ಬಿಜೆಪಿ ಅಭ್ಯರ್ಥಿ ಹರ್ಷ್ ಮಹಾಜನ್ ಗೆದ್ದಿದ್ದಾರೆ.
ಇಬ್ಬರೂ ಅಭ್ಯರ್ಥಿಗಳ ಪರವಾಗಿ ತಲಾ 34 ಮತಗಳು ಚಲಾವಣೆಯಾಗಿತ್ತು. ಅಂತಿಮವಾಗಿ ಚೀಟಿ ಎತ್ತುವ ಮೂಲಕ ರಾಜ್ಯಸಭೆಗೆ ಆಯ್ಕೆ ಮಾಡಲಾಯಿತು.68 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 40 ಶಾಸಕರನ್ನು ಹೊಂದಿರುವ ಮತ್ತು ಸ್ವತಂತ್ರರ ಬೆಂಬಲವನ್ನು ಪಡೆದಿರುವ ಕಾಂಗ್ರೆಸ್ಗೆ ಇದು ದೊಡ್ಡ ಆಘಾತವಾಗಿದೆ.
ಕಾಂಗ್ರೆಸ್ ಶಾಸಕರು ‘ಆತ್ಮಸಾಕ್ಷಿಯ ಮತ’ ಚಲಾಯಿಸುತ್ತಾರೆ ಎಂಬ ವಿಶ್ವಾಸದಲ್ಲಿದ್ದ ಬಿಜೆಪಿ ಪರವಾಗಿ ಒಂಬತ್ತು ಶಾಸಕರು ಮತ ಚಲಾಯಿಸಿದ್ದಾರೆ ಎಂದು ಫಲಿತಾಂಶ ಸ್ಪಷ್ಟಪಡಿಸಿದೆ. ಪ್ರಸ್ತುತ ಹಿಮಾಚಲಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ 25 ಶಾಸಕರನ್ನು ಹೊಂದಿದೆ.
Advertisement