ಹಿಮಾಚಲ ಪ್ರದೇಶದಲ್ಲಿ ರಾಜ್ಯಸಭೆಗೆ ಅಡ್ಡಮತದಾನ: ಕಾಂಗ್ರೆಸ್ ನ ಅಭಿಷೇಕ್ ಮನು ಸಿಂಘ್ವಿಗೆ ಸೋಲು!

ರಾಜ್ಯಸಭೆಗೆ ಇಂದು ಚುನಾವಣೆ ನಡೆದಿದ್ದು ಹಿಮಾಚಲ ಪ್ರದೇಶದಲ್ಲಿ ಅಡ್ಡಮತದಾನದ ವರದಿಯಾಗಿದೆ.
ಅಭಿಷೇಕ್ ಮನು ಸಿಂಘ್ವಿ
ಅಭಿಷೇಕ್ ಮನು ಸಿಂಘ್ವಿ
Updated on

ಶಿಮ್ಲಾ: ರಾಜ್ಯಸಭೆಗೆ ಇಂದು ಚುನಾವಣೆ ನಡೆದಿದ್ದು ಹಿಮಾಚಲ ಪ್ರದೇಶದಲ್ಲಿ ಅಡ್ಡಮತದಾನದ ವರದಿಯಾಗಿದೆ. ಅಡ್ಡಮತದಾನದ ಪರಿಣಾಮ ಅಭಿಷೇಕ್ ಮನು ಸಿಂಘ್ವಿ ಸೋಲು ಕಂಡಿದ್ದಾರೆ. ಸಿಂಘ್ವಿ ವಿರುದ್ಧ ಬಿಜೆಪಿ ಅಭ್ಯರ್ಥಿ ಹರ್ಷ್ ಮಹಾಜನ್ ಗೆದ್ದಿದ್ದಾರೆ.

ಇಬ್ಬರೂ ಅಭ್ಯರ್ಥಿಗಳ ಪರವಾಗಿ ತಲಾ 34 ಮತಗಳು ಚಲಾವಣೆಯಾಗಿತ್ತು. ಅಂತಿಮವಾಗಿ ಚೀಟಿ ಎತ್ತುವ ಮೂಲಕ ರಾಜ್ಯಸಭೆಗೆ ಆಯ್ಕೆ ಮಾಡಲಾಯಿತು.68 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 40 ಶಾಸಕರನ್ನು ಹೊಂದಿರುವ ಮತ್ತು ಸ್ವತಂತ್ರರ ಬೆಂಬಲವನ್ನು ಪಡೆದಿರುವ ಕಾಂಗ್ರೆಸ್‌ಗೆ ಇದು ದೊಡ್ಡ ಆಘಾತವಾಗಿದೆ.

ಅಭಿಷೇಕ್ ಮನು ಸಿಂಘ್ವಿ
ರಾಜ್ಯಸಭೆ ಚುನಾವಣೆ ಫಲಿತಾಂಶ: ಯುಪಿಯಲ್ಲಿ 8 ಸ್ಥಾನ ಗೆದ್ದ ಬಿಜೆಪಿ, ಎರಡು ಸ್ಥಾನ ಉಳಿಸಿಕೊಂಡ ಎಸ್‌ಪಿ

ಕಾಂಗ್ರೆಸ್ ಶಾಸಕರು ‘ಆತ್ಮಸಾಕ್ಷಿಯ ಮತ’ ಚಲಾಯಿಸುತ್ತಾರೆ ಎಂಬ ವಿಶ್ವಾಸದಲ್ಲಿದ್ದ ಬಿಜೆಪಿ ಪರವಾಗಿ ಒಂಬತ್ತು ಶಾಸಕರು ಮತ ಚಲಾಯಿಸಿದ್ದಾರೆ ಎಂದು ಫಲಿತಾಂಶ ಸ್ಪಷ್ಟಪಡಿಸಿದೆ. ಪ್ರಸ್ತುತ ಹಿಮಾಚಲಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ 25 ಶಾಸಕರನ್ನು ಹೊಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com