ಕರ್ನಾಟಕ ಸರ್ಕಾರದ 15 ಲಕ್ಷ ರೂಪಾಯಿ ಆರ್ಥಿಕ ನೆರವು ನಮಗೆ ಬೇಡ: ಕೇರಳದ ಮೃತ ಅಜೀಶ್ ಕುಟುಂಬ!

ಬೇಲೂರಿನ ಮಖ್ನಾ ಕಾಡಾನೆ ತುಳಿದು ಸಾವನ್ನಪ್ಪಿದ ಕೇರಳದ ಪದಮಲ ಮೂಲದ ಅಜೀಶ್ ಅವರ ಕುಟುಂಬವು ಕರ್ನಾಟಕ ಸರ್ಕಾರ ಘೋಷಿಸಿದ 15 ಲಕ್ಷ ರೂಪಾಯಿ ಪರಿಹಾರವನ್ನು ನಿರಾಕರಿಸಿದೆ.
ಕಾಡಾನೆ ದಾಳಿಗೆ ಬಲಿಯಾದ ಅಜೀಶ್
ಕಾಡಾನೆ ದಾಳಿಗೆ ಬಲಿಯಾದ ಅಜೀಶ್
Updated on

ವಯನಾಡು: ಬೇಲೂರಿನ ಮಖ್ನಾ ಕಾಡಾನೆ ತುಳಿದು ಸಾವನ್ನಪ್ಪಿದ ಕೇರಳದ ಪದಮಲ ಮೂಲದ ಅಜೀಶ್ ಅವರ ಕುಟುಂಬವು ಕರ್ನಾಟಕ ಸರ್ಕಾರ ಘೋಷಿಸಿದ 15 ಲಕ್ಷ ರೂಪಾಯಿ ಪರಿಹಾರವನ್ನು ನಿರಾಕರಿಸಿದೆ.

ಕರ್ನಾಟಕ ವಿಧಾನಸಭೆಯಲ್ಲಿ ಪರಿಹಾರದ ಕುರಿತು ಬಿಜೆಪಿ ಗದ್ದಲ ಸೃಷ್ಟಿಸಿದ ನಂತರ ಕುಟುಂಬ ಈ ನಿರ್ಧಾರ ತೆಗೆದುಕೊಂಡಿದೆ. ಅಜೀಶ್ ಅವರ ಕುಟುಂಬವು ಬಿಜೆಪಿಯ ನಡವಳಿಕೆಯನ್ನು ಖಂಡಿಸಿದ್ದು ಇದು ಅಮಾನವೀಯ ಎಂದು ಬಣ್ಣಿಸಿದೆ.

ಫೆಬ್ರವರಿ 10ರಂದು ಕಾಡಾನೆ ಅಜೀಶ್‌ರನ್ನು ತುಳಿದು ಕೊಂದಿತ್ತು. ಆನೆಗೆ ಕರ್ನಾಟಕ ಸರ್ಕಾರ ರೇಡಿಯೋ ಕಾಲರ್ ಅಳವಡಿಸಿದ್ದರಿಂದ ಕರ್ನಾಟಕ ಸರ್ಕಾರ ಅಜೀಶ್ ಕುಟುಂಬಕ್ಕೆ ಭಾರಿ ಪರಿಹಾರ ಘೋಷಿಸಿತ್ತು.

ಕಾಡಾನೆ ದಾಳಿಗೆ ಬಲಿಯಾದ ಅಜೀಶ್
ರಾಹುಲ್ ಗಾಂಧಿ ಮನವಿ ಮೇರೆಗೆ ಕೇರಳ ಸಂತ್ರಸ್ತನ ಕುಟುಂಬಕ್ಕೆ ಪರಿಹಾರ: ಈಶ್ವರ್ ಖಂಡ್ರೆ

ಈ ವಿಷಯವಾಗಿ ಬಿಜೆಪಿ ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಸಿತ್ತು. ರಾಜ್ಯದ ತೆರಿಗೆ ಹಣ ರಾಹುಲ್ ಗಾಂಧಿ ಕ್ಷೇತ್ರಕ್ಕೆ ಎಂದು ಬಿಜೆಪಿ ನಾಯಕರು ಲೇವಡಿ ಮಾಡಿದ್ದರು. ಇದರಿಂದಾಗಿ ಈ ವಿವಾದದ ಹಣವನ್ನು ಕುಟುಂಬ ನಿರಾಕರಿಸಿದೆ.

ವಯನಾಡು ಸಂಸದ ರಾಹುಲ್ ಗಾಂಧಿ ಅವರು ಅಜೀಶ್ ಅವರ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು. ನಂತರ ಕರ್ನಾಟಕ ಮುಖ್ಯಮಂತ್ರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದ ನಂತರ ಸಚಿವ ಈಶ್ವರ್ ಖಂಡ್ರೆ ಅವರು 15 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com