ಸುಖ್ವಿಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆಯೇ? ಹಿಮಾಚಲ ಸಿಎಂ ಹೇಳಿದ್ದು ಹೀಗೆ...

ರಾಜ್ಯಸಭಾ ಚುನಾವಣೆಯಲ್ಲಿ ಕೆಲವು ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿದ ನಂತರ ತಮ್ಮ ಸರ್ಕಾರ ಬಹುಮತ ಕಳೆದುಕೊಳ್ಳುವ ಅಪಾಯವಿದ್ದರೂ ಕೂಡ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಸುಖ್ವಿಂದರ್ ಸಿಂಗ್ ಬುಧವಾರ ಹೇಳಿದ್ದಾರೆ.
ಸಿಎಂ ಸುಖ್ವಿಂದರ್ ಸಿಂಗ್
ಸಿಎಂ ಸುಖ್ವಿಂದರ್ ಸಿಂಗ್ ANI
Updated on

ಶಿಮ್ಲಾ: ರಾಜ್ಯಸಭಾ ಚುನಾವಣೆಯಲ್ಲಿ ಕೆಲವು ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿದ ನಂತರ ತಮ್ಮ ಸರ್ಕಾರ ಬಹುಮತ ಕಳೆದುಕೊಳ್ಳುವ ಅಪಾಯವಿದ್ದರೂ ಕೂಡ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಸುಖ್ವಿಂದರ್ ಸಿಂಗ್ ಬುಧವಾರ ಹೇಳಿದ್ದಾರೆ.

ಸಿಎಂ ಸುಖ್ವಿಂದರ್ ಸಿಂಗ್
ಹಿಮಾಚಲ ಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು: ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಶಿಮ್ಲಾಗೆ ದೌಡು!

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೊಬ್ಬ ಹೋರಾಟಗಾರ, ನಾನು ವಿನಮ್ರ ಕುಟುಂಬದಿಂದ ಬಂದವನು, ನಾವು ಈ ಯುದ್ಧವನ್ನು ಗೆಲ್ಲುತ್ತೇವೆ ಮತ್ತು ವಿಧಾನಸಭೆಯಲ್ಲೂ ಬಹುಮತವನ್ನು ಸಾಬೀತುಪಡಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಿಮಾಚಲ ಪ್ರದೇಶದಲ್ಲಿ ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಆರು ಕಾಂಗ್ರೆಸ್ ಶಾಸಕರು ಮತ ಚಲಾಯಿಸಿದ್ದು, ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಅವರ ಕಾರ್ಯಶೈಲಿಯಿಂದ ಅವರು ನಿರಾಶೆಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

ಆರು ಶಾಸಕರು ಅಡ್ಡ ಮತದಾನ ಮಾಡಿದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದ ಬಿಕ್ಕಟ್ಟನ್ನು ಎದುರಿಸುತ್ತಿದೆ. "ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಕೆಲವು ಶಾಸಕರೊಂದಿಗೆ ನಾವು ಸಂಪರ್ಕದಲ್ಲಿದ್ದು, ತಮ್ಮ ಸರ್ಕಾರ ಐದು ವರ್ಷಗಳ ಆಡಳಿವನ್ನು ಪೂರ್ಣಗೊಳಿಸಲಿದೆ ಎಂದು ಸುಖ್ವಿಂದರ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com