ಎನ್ಇಇಟಿ ವಿರುದ್ಧ ಡಿಎಂಕೆ ಸಹಿ ಅಭಿಯಾನ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂ ಕೋರ್ಟ್ ನಲ್ಲಿ ವಜಾ

ಎನ್ಇಇಟಿ ವಿರುದ್ಧ ಡಿಎಂಕೆ ಸಹಿ ಅಭಿಯಾನವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on

ನವದೆಹಲಿ: ಎನ್ಇಇಟಿ ವಿರುದ್ಧ ಡಿಎಂಕೆ ಸಹಿ ಅಭಿಯಾನವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲ ಡಿಎಂಕೆ ಸಹಿ ಸಂಗ್ರಹ ಅಭಿಯಾನವನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾಗೊಳಿಸಿರುವ ಕೋರ್ಟ್, ಸರಿಯಾದ ತಿಳುವಳಿಕೆ ಇರುವ ವಿದ್ಯಾರ್ಥಿಗಳ ಮೇಲೆ ರಾಷ್ಟ್ರೀಯ ಮಟ್ಟದ ಪರೀಕ್ಷೆಯೊಂದರ ವಿರುದ್ಧದ ಈ ರೀತಿಯ ಸಹಿ ಸಂಗ್ರಹ ಅಭಿಯಾನಗಳು ಪರಿಣಾಮ ಉಂಟುಮಾಡುವುದಿಲ್ಲ ಎಂದು ಹೇಳಿದೆ. 

"ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಚೆನ್ನಾಗಿ ತಿಳುವಳಿಕೆ ಹೊಂದಿದ್ದಾರೆ ಮತ್ತು ಜಾಗೃತರಾಗಿದ್ದಾರೆ. ಕೇಂದ್ರೀಯ ಯೋಜನೆಯೊಂದಿಗೆ ರಾಷ್ಟ್ರೀಯ ಮಟ್ಟದ ಪರೀಕ್ಷೆಯ ವಿರುದ್ಧ ಇಂತಹ ಅಭಿಯಾನಗಳು ಅವರ ಮೇಲೆ ಪರಿಣಾಮ ಬೀರುವುದಿಲ್ಲ. ಪ್ರಚಾರ ಮಾಡಲು ಬಯಸುವವರು ಅದನ್ನು ಮುಂದುವರಿಸಲಿ" ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಉನ್ನತ ನ್ಯಾಯಾಲಯದ ಪೀಠ ಹೇಳಿದೆ. 

ವಿದ್ಯಾರ್ಥಿಗಳ ಸಹಿ ತೆಗೆದುಕೊಳ್ಳಲು ಅವರ ಪೋಷಕರಿಂದ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕಾಗಿ ಅರ್ಜಿದಾರರಾಗಿರುವ ಸಾಮಾಜಿಕ ಕಾರ್ಯಕರ್ತ ಮತ್ತು ವಕೀಲ ಎಂಎಲ್ ರವಿ ನೀಟ್ ವಿರುದ್ಧ ಡಿಎಂಕೆ ಸಹಿ ಅಭಿಯಾನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

"ಈ ಕಾಯ್ದೆಯಿಂದ ವಿದ್ಯಾರ್ಥಿಗಳು ತೊಂದರೆಗೊಳಗಾಗುತ್ತಾರೆ ಮತ್ತು ನಂತರ ಅವರು ನೀಟ್ ಪರೀಕ್ಷೆಗಳನ್ನು ಎದುರಿಸಬೇಕಾಗಬಹುದು, ವಿದ್ಯಾರ್ಥಿಗಳು ಖಿನ್ನತೆಗೆ ಒಳಗಾಗಬಹುದು ಮತ್ತು ಮಾನಸಿಕ ಸಂಕಟಕ್ಕೆ ಒಳಗಾಗಬಹುದು ಮತ್ತು ಅವರ ವೃತ್ತಿಜೀವನವನ್ನು ಹಾಳುಮಾಡಬಹುದು" ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com