ಆರ್ಟಿಕಲ್ 370ರ ರದ್ದತಿ ಎತ್ತಿಹಿಡಿದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಪರಿಶೀಲನಾ ಅರ್ಜಿ!

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಒದಗಿಸಿದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರದ ಸಿಂಧುತ್ವವನ್ನು ಎತ್ತಿಹಿಡಿಯುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿಗಳನ್ನು ಸಲ್ಲಿಸಲಾಗಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಒದಗಿಸಿದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರದ ಸಿಂಧುತ್ವವನ್ನು ಎತ್ತಿಹಿಡಿಯುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿಗಳನ್ನು ಸಲ್ಲಿಸಲಾಗಿದೆ. 

ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಮೂವ್‌ಮೆಂಟ್ ಅಧ್ಯಕ್ಷ ಡಾ ಹುಸೇನ್ ಮತ್ತು ಜಮ್ಮು ಮತ್ತು ಕಾಶ್ಮೀರ ಅವಾಮಿ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಮುಜಾಫರ್ ಷಾ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ಆರ್ಟಿಕಲ್ 370 ಅನ್ನು ರದ್ದುಗೊಳಿಸಲು ಸಾಧ್ಯವಿಲ್ಲ. 370ನೇ ವಿಧಿ ಕುರಿತ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ನಾವು ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದೇವೆ. ನಾವು ಈ ಬಗ್ಗೆ ನ್ಯಾಯಾಲಯದಲ್ಲಿ ವಾದ ಮಾಡುತ್ತೇವೆ. ಸಿಪಿಐ(ಎಂ), ನ್ಯಾಷನಲ್ ಕಾನ್ಫರೆನ್ಸ್‌ನ ಮೊಹಮ್ಮದ್ ಯೂಸುಫ್ ತರಿಗಾಮಿ, ವಕೀಲ ಮುಜಾಫರ್ ಇಕ್ಬಾಲ್ ಮತ್ತು ಪಿಡಿಪಿ ಕೂಡ ಮರುಪರಿಶೀಲನಾ ಅರ್ಜಿಗಳನ್ನು ಸಲ್ಲಿಸಿದೆ. ಕಳೆದ ತಿಂಗಳು, ಐದು ನ್ಯಾಯಾಧೀಶರ ಸಂವಿಧಾನ ಪೀಠವು 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಎತ್ತಿಹಿಡಿದಿತ್ತು.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರನ್ನೊಳಗೊಂಡ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ರಾಜ್ಯದಲ್ಲಿ ಯುದ್ಧಕಾಲದ ಸಂದರ್ಭಗಳಿಂದಾಗಿ 370ನೇ ವಿಧಿಯನ್ನು ವಿಧಿಸಲಾಗಿದ್ದು ಇದು ಪರಿವರ್ತನಾ ಉದ್ದೇಶವನ್ನು ಪೂರೈಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿತ್ತು. 

ಆರ್ಟಿಕಲ್ 370 ಇನ್ನು ಮುಂದೆ 'ತಾತ್ಕಾಲಿಕ ನಿಬಂಧನೆ' ಅಲ್ಲ
ಆರ್ಟಿಕಲ್ 370 ರ ರದ್ದತಿಯನ್ನು ಪ್ರಶ್ನಿಸಿದ ಅರ್ಜಿದಾರರು ಆರ್ಟಿಕಲ್ 370 ಇನ್ನು ಮುಂದೆ 'ತಾತ್ಕಾಲಿಕ ನಿಬಂಧನೆ' ಅಲ್ಲ. ಜಮ್ಮು ಮತ್ತು ಕಾಶ್ಮೀರದ ಸಂವಿಧಾನ ಸಭೆಯ ವಿಸರ್ಜನೆಯ ನಂತರ ಶಾಶ್ವತತೆಯನ್ನು ಪಡೆದುಕೊಂಡಿದೆ ಎಂದು ಹೇಳಿದ್ದಾರೆ. ಭಾರತದ ಒಕ್ಕೂಟಕ್ಕೆ ಸೇರ್ಪಡೆಯಾದಾಗ ಜಮ್ಮು ಮತ್ತು ಕಾಶ್ಮೀರ ರಾಜ್ಯವು ಯಾವುದೇ ಸಾರ್ವಭೌಮತ್ವವನ್ನು ಉಳಿಸಿಕೊಂಡಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ರಾಜಪ್ರಭುತ್ವದ ಮಾಜಿ ಆಡಳಿತಗಾರ ಮಹಾರಾಜ ಹರಿ ಸಿಂಗ್ ಅವರು ತಮ್ಮ ಸಾರ್ವಭೌಮತ್ವವನ್ನು ಉಳಿಸಿಕೊಳ್ಳುವುದಾಗಿ ಘೋಷಿಸಿದ್ದರೂ, ಅವರ ಉತ್ತರಾಧಿಕಾರಿ ಕರಣ್ ಸಿಂಗ್ ಅವರು ರಾಜ್ಯದ ಇತರ ಎಲ್ಲಾ ಕಾನೂನುಗಳಿಗಿಂತ ಭಾರತೀಯ ಸಂವಿಧಾನವು ಮೇಲುಗೈ ಸಾಧಿಸುತ್ತದೆ ಎಂದು ಮತ್ತೊಂದು ಘೋಷಣೆಯನ್ನು ಹೊರಡಿಸಿದರು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com