ಮಕರ ಸಂಕ್ರಾಂತಿಯ ದಿನ ಅಯೋಧ್ಯೆಗೆ ಧಾವಿಸಿದ ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರು!

ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರು ಪವಿತ್ರ ಮಕರ ಸಂಕ್ರಾಂತಿ ಹಬ್ಬದ ದಿನ ಅಯೋಧ್ಯೆಗೆ ಧಾವಿಸಿದ್ದಾರೆ. 
ಸರಯೂ ನದಿಯಲ್ಲಿ ಪವಿತ್ರ ಸ್ನಾನ ಮಾಡುತ್ತಿರುವ ಕಾಂಗ್ರೆಸ್ ನಾಯಕರು
ಸರಯೂ ನದಿಯಲ್ಲಿ ಪವಿತ್ರ ಸ್ನಾನ ಮಾಡುತ್ತಿರುವ ಕಾಂಗ್ರೆಸ್ ನಾಯಕರು
Updated on

ಅಯೋಧ್ಯೆ: ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರು ಪವಿತ್ರ ಮಕರ ಸಂಕ್ರಾಂತಿ ಹಬ್ಬದ ದಿನ ಅಯೋಧ್ಯೆಗೆ ಧಾವಿಸಿದ್ದಾರೆ. ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸದೇ ಇರಲು ಕಾಂಗ್ರೆಸ್ ನ ಹೈಕಮಾಂಡ್ ನಿರ್ಧರಿಸಿದ್ದರೂ, ಉತ್ತರ ಪ್ರದೇಶ ಕಾಂಗ್ರೆಸ್ ನಾಯಕರು ಅಯೋಧ್ಯೆಗೆ ಭೇಟಿ ನೀಡಿದ್ದಾರೆ. 

ಇದು ತಮ್ಮ ಖಾಸಗಿ ಭೇಟಿಯಾಗಿದ್ದು, ಭಗವಾನ್ ರಾಮ ಎಲ್ಲರಿಗೂ ಸೇರಿದವರಾಗಿದ್ದಾರೆ, ಆದ್ದರಿಂದ ತಾವು ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಹಾಜರಾಗುವುದಾಗಿ ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಅಯೋಧ್ಯೆಗೆ ತೆರಳಿದ್ದ ಕಾಂಗ್ರೆಸ್ ನಾಯಕರು ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಸರಯೂ ನದಿಯಲ್ಲಿ ಸ್ನಾನ ಮಾಡಿ, ರಾಮಲಲ್ಲಾ ದರ್ಶನ ಮಾಡಿ ಹನುಮಗಿರಿಗೂ ಭೇಟಿ ನೀಡಿದರು. 

ಉತ್ತರ ಪ್ರದೇಶ ಕಾಂಗ್ರೆಸ್ ನಾಯಕರು ಪಕ್ಷದ ನಿರ್ಧಾರಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತವೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಯುಪಿ ನಾಯಕ ಅವಿನಾಶ್ ಪಾಂಡೆ, ಅವರ ಕ್ರಮವು ಪಕ್ಷದ ರೇಖೆಯಿಂದ ವಿಚಲನವಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಯುಪಿ ನಾಯಕ ಅವಿನಾಶ್ ಪಾಂಡೆ, ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು "ನಂಬಿಕೆ ಇರುವವರು ಹೋಗಬಹುದು" ಎಂದು ಬಹಿರಂಗವಾಗಿ ಹೇಳಿರುವುದನ್ನು ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com