ನವದೆಹಲಿ: ಇರಾನ್ ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ನಡೆಸಿರುವ ಕ್ಷಿಪಣಿ ದಾಳಿಯ ಬಗ್ಗೆ ಭಾರತ ಪ್ರತಿಕ್ರಿಯೆ ನೀಡಿದೆ. ಸ್ವರಕ್ಷಣೆಗಾಗಿ ದೇಶಗಳು ಕೈಗೊಳ್ಳುವ ಕ್ರಮಗಳ ಬಗ್ಗೆ ಅರಿವಿದೆ ಎಂದು ವಿದೇಶಾಂಗ ಇಲಾಖೆ ಹೇಳಿದೆ. ಇದೇ ವೇಳೆ ಭಯೋತ್ಪಾದನೆಯೆಡೆಗೆ ಶೂನ್ಯ ಸಹನೆಯನ್ನು ಹೊಂದಿರುವ ದೃಢ ನಿಲುವನ್ನು ಭಾರತ ಪ್ರಕಟಿಸಿದೆ.
ಈ ದಾಳಿ ಇರಾನ್ ಹಾಗೂ ಪಾಕಿಸ್ತಾನಕ್ಕೆ ಸಂಬಂಧಿಸಿದ ವಿಷಯವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
"ಭಾರತಕ್ಕೆ ಸಂಬಂಧಿಸಿದಂತೆ, ನಾವು ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯ ರಾಜಿಯಾಗದ ನಿಲುವನ್ನು ಹೊಂದಿದ್ದೇವೆ. ದೇಶಗಳು ತಮ್ಮ ಆತ್ಮರಕ್ಷಣೆಗಾಗಿ ತೆಗೆದುಕೊಳ್ಳುವ ಕ್ರಮಗಳನ್ನು ನಾವು ಅರ್ಥಮಾಡಿಕೊಂಡಿದ್ದೇವೆ" ಎಂದು ಜೈಸ್ವಾಲ್ ಹೇಳಿದರು.
ಟೆಹ್ರಾನ್ ಹಿಂದೆಂದೂ ನಡೆಸದ ರೀತಿಯಲ್ಲಿ ಪಾಕ್ ವಿರುದ್ಧ ಕ್ಷಿಪಣಿ ಮತ್ತು ಡ್ರೋನ್ ದಾಳಿಯನ್ನು ಪ್ರಾರಂಭಿಸಿ ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದ ಭಯೋತ್ಪಾದಕ ಗುಂಪಿನ ನೆಲೆಗಳ ಮೇಲೆ ನಿರ್ದೇಶಿಸಲ್ಪಟ್ಟಿದೆ ಎಂದು ಹೇಳಿದೆ.
Advertisement