ಅಯೋಧ್ಯೆ ರಾಮ ಮಂದಿರ: ಗರ್ಭಗುಡಿಯೊಳಗೆ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ; ಫೋಟೋ ವೈರಲ್

ಅಯೋಧ್ಯೆ ರಾಮ ಮಂದಿರದ ಗರ್ಭಗೃಹದಲ್ಲಿ ಇರಿಸಲಾದ ರಾಮ್ ಲಲ್ಲಾನ ವಿಗ್ರಹದ ಮೊದಲ ಚಿತ್ರಗಳು ಹೊರಬಂದಿವೆ. 51 ಇಂಚಿನ ರಾಮ್ ಲಲ್ಲಾ ವಿಗ್ರಹವನ್ನು ಬಿಳಿ ಬಟ್ಟೆಯಲ್ಲಿ ಸುತ್ತಿ ನಿಲ್ಲಿಸಿರುವ ಭಂಗಿಯಲ್ಲಿ ಕಾಣಬಹುದು. ರಾಮ್ ಲಲ್ಲಾ ವಿಗ್ರಹವು 150 ಕೆಜಿಗಿಂತ ಹೆಚ್ಚು ತೂಕವಿದ್ದು, ಇದನ್ನು ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ್ದಾರೆ.
ರಾಮ ಲಲ್ಲಾನ ಮೂರ್ತಿ
ರಾಮ ಲಲ್ಲಾನ ಮೂರ್ತಿ

ಅಯೋಧ್ಯೆ: ಅಯೋಧ್ಯೆ ರಾಮ ಮಂದಿರದ ಗರ್ಭಗೃಹದಲ್ಲಿ ಇರಿಸಲಾದ ರಾಮ್ ಲಲ್ಲಾನ ವಿಗ್ರಹದ ಮೊದಲ ಚಿತ್ರಗಳು ಹೊರಬಂದಿವೆ. 51 ಇಂಚಿನ ರಾಮ್ ಲಲ್ಲಾ ವಿಗ್ರಹವನ್ನು ಬಿಳಿ ಬಟ್ಟೆಯಲ್ಲಿ ಸುತ್ತಿ ನಿಲ್ಲಿಸಿರುವ ಭಂಗಿಯಲ್ಲಿ ಕಾಣಬಹುದು. ರಾಮ್ ಲಲ್ಲಾ ವಿಗ್ರಹವು 150 ಕೆಜಿಗಿಂತ ಹೆಚ್ಚು ತೂಕವಿದ್ದು, ಇದನ್ನು ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ್ದಾರೆ.

ಭಗವಾನ್ ರಾಮ ಮತ್ತು ಅವರ ಸಹೋದರರ ಮೂಲ ವಿಗ್ರಹಗಳನ್ನು ಗರ್ಭಗುಡಿಯೊಳಗಿನ ಹೊಸ ವಿಗ್ರಹ ಅಥವಾ ಜನವರಿ 22 ರ ಸಮಾರಂಭದ ಮೊದಲು 'ಗರ್ಭಗೃಹ'ದ ಮುಂದೆ ಸ್ಥಾಪಿಸಲಾಗುವುದು. 1949 ರಿಂದ ಪೂಜಿಸಲ್ಪಡುತ್ತಿರುವ ಮೂಲ ವಿಗ್ರಹಗಳನ್ನು ಪ್ರಸ್ತುತ ಆವರಣದೊಳಗೆ ನಿರ್ಮಿಸಲಾದ ದೇವಾಲಯದಲ್ಲಿ ಇರಿಸಲಾಗಿದೆ. ಜನವರಿ 22 ರ ‘ಪ್ರಾಣ ಪ್ರತಿಷ್ಠಾನ’ ಸಮಾರಂಭದ ಮೊದಲು ಹೊಸ ದೇವಾಲಯಕ್ಕೆ ಸ್ಥಳಾಂತರಿಸಲಾಗುತ್ತದೆ.

ನಿನ್ನೆ ಮಧ್ಯಾಹ್ನ ಪ್ರಾರ್ಥನೆಯ ಪಠಣಗಳ ನಡುವೆ ರಾಮ್ ಲಲ್ಲಾ ಮೂರ್ತಿಯನ್ನು ಗರ್ಭಗುಡಿಯಲ್ಲಿ ಇರಿಸಲಾಯಿತು ಎಂದು ಪವಿತ್ರೀಕರಣ ಸಮಾರಂಭಕ್ಕೆ ಸಂಬಂಧಿಸಿದ ಅರ್ಚಕ ಅರುಣ್ ದೀಕ್ಷಿತ್ ಸುದ್ದಿ ಸಂಸ್ಥೆಗಳಿಗೆ ತಿಳಿಸಿದ್ದಾರೆ. ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಸದಸ್ಯರು ಕೂಡ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು ಎಂದು ವಿಶ್ವ ಹಿಂದೂ ಪರಿಷತ್ (VHP) ಹೇಳಿದೆ.

ಟ್ರಸ್ಟ್‌ನ ಸದಸ್ಯ ಅನಿಲ್ ಮಿಶ್ರಾ ಅವರು 'ಪ್ರಧಾನ ಸಂಕಲ್ಪ'ವನ್ನು ನಡೆಸಿದರು. ಪ್ರಧಾನ ಸಂಕಲ್ಪದ ಹಿಂದಿನ ಕಲ್ಪನೆಯೆಂದರೆ, ಭಗವಾನ್ ರಾಮನ 'ಪ್ರತಿಷ್ಠೆ'ಯನ್ನು ಎಲ್ಲರ ಕಲ್ಯಾಣಕ್ಕಾಗಿ, ರಾಷ್ಟ್ರದ ಕಲ್ಯಾಣಕ್ಕಾಗಿ, ಮಾನವೀಯತೆಯ ಕಲ್ಯಾಣಕ್ಕಾಗಿ ಮತ್ತು ಈ ಕೆಲಸಕ್ಕೆ ಕೊಡುಗೆ ನೀಡಿದವರಿಗಾಗಿ ಮಾಡಲಾಗುತ್ತಿದೆ ಎಂದು ದೀಕ್ಷಿತ್ ಹೇಳಿದರು. 

ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22 ರಂದು ರಾಮಮಂದಿರದಲ್ಲಿ 'ಪ್ರಾಣ ಪ್ರತಿಷ್ಠಾ' ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ, ಅಂದು ಅಯೋಧ್ಯೆಗೆ ಭೇಟಿ ನೀಡದಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಬದಲಾಗಿ, ಜನವರಿ 23 ರಿಂದ ಸಾರ್ವಜನಿಕರಿಗೆ ದೇವಸ್ಥಾನವನ್ನು ತೆರೆಯುವ ನಂತರ ಎಲ್ಲರೂ ಭೇಟಿ ನೀಡುವಂತೆ ಅವರು ಸಾರ್ವಜನಿಕರನ್ನು ಕೇಳಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com