ಸಂಸತ್ ಭದ್ರತಾ ಲೋಪ: ಆರೋಪ ಗಂಭೀರ ಎಂದ ನ್ಯಾಯಾಲಯ, ನೀಲಂ ಆಜಾದ್‌ಗೆ ಜಾಮೀನು ನಿರಾಕರಣೆ

ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತರಾಗಿರುವ ನೀಲಂ ಆಜಾದ್ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ. ತನಿಖೆಯು ಆರಂಭಿಕ ಹಂತದಲ್ಲಿದ್ದು, ಅವರು ದೇಶದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ಅಡ್ಡಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನೀಲಂ ಆಜಾದ್
ನೀಲಂ ಆಜಾದ್
Updated on

ನವದೆಹಲಿ: ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತರಾಗಿರುವ ನೀಲಂ ಆಜಾದ್ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ. ತನಿಖೆಯು ಆರಂಭಿಕ ಹಂತದಲ್ಲಿದ್ದು, ಅವರು ದೇಶದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ಅಡ್ಡಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಪ್ರಕರಣದ ಎಫ್‌ಐಆರ್ ಅನ್ನು ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ವಿಭಾಗಗಳ ಅಡಿಯಲ್ಲಿ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ದೀಪ್ ಕೌರ್ ಹೇಳಿದ್ದಾರೆ.

ಪ್ರಸ್ತುತ ಪ್ರಕರಣದ ತನಿಖೆಯು ಆರಂಭಿಕ ಹಂತದಲ್ಲಿದೆ. ಆರೋಪಿಯ ವಿರುದ್ಧದ ಆರೋಪಗಳು ಗಂಭೀರ ಸ್ವರೂಪದ್ದಾಗಿದೆ, ಏಕೆಂದರೆ ಆಕೆ ಇತರ ಸಹ-ಆರೋಪಿಗಳೊಂದಿಗೆ ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ಅಡ್ಡಿಪಡಿಸುವಲ್ಲಿ ಭಾಗಿಯಾಗಿದ್ದಾಳೆ. ತನಿಖೆ ಆರಂಭಿಕ ಹಂತದಲ್ಲಿರುವುದರಿಂದ ಜಾಮೀನು ನೀಡಲು ಸೂಕ್ತವಲ್ಲ ಎಂದರು. 

ಅರ್ಜಿದಾರರ ವಿರುದ್ಧ ಹೊರಿಸಲಾದ ಆರೋಪಗಳ  ಗಂಭೀರತೆ ಮತ್ತು ತನಿಖೆಯ ಆರಂಭಿಕ ಹಂತವನ್ನು ಪರಿಗಣಿಸಿ, ಜಾಮೀನಿನ ಮೇಲೆ ಆರೋಪಿ ಬಿಡುಗಡೆ ಮಾಡಲು ಸೂಕ್ತ ಪ್ರಕರಣವೆಂದು ನನಗೆ ಕಂಡುಬಂದಿಲ್ಲ. ಪ್ರಸ್ತುತ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಾಧೀಶರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com