ಪ್ರಶ್ನೆಗಾಗಿ ಲಂಚ ಪ್ರಕರಣ: ಜ. 25ಕ್ಕೆ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗುವಂತೆ ವಕೀಲ ದೇಹದ್ರಾಯ್ ಗೆ ಸೂಚನೆ

ಮಾಜಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧದ ಲೋಕಸಭೆಯಲ್ಲಿ ಪ್ರಶ್ನೆ ಕೇಳುವುದಕ್ಕೆ ಲಂಚ ಪಡೆದ ಪ್ರಕರಣವನ್ನು ಲೋಕಪಾಲ್ ಗೆ ಉಲ್ಲೇಖಿಸಿದ ದೂರಿನ ತನಿಖೆಗೆ ಸಂಬಂಧಿಸಿದಂತೆ ಗುರುವಾರ ತನ್ನ ಮುಂದೆ ವಿಚಾರಣೆಗೆ...
ಮಹುವಾ ಮೊಯಿತ್ರಾ - ಜೈ ಅನಂತ್ ದೇಹದ್ರಾಯ್
ಮಹುವಾ ಮೊಯಿತ್ರಾ - ಜೈ ಅನಂತ್ ದೇಹದ್ರಾಯ್
Updated on

ನವದೆಹಲಿ: ಮಾಜಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧದ ಲೋಕಸಭೆಯಲ್ಲಿ ಪ್ರಶ್ನೆ ಕೇಳುವುದಕ್ಕೆ ಲಂಚ ಪಡೆದ ಪ್ರಕರಣವನ್ನು ಲೋಕಪಾಲ್ ಗೆ ಉಲ್ಲೇಖಿಸಿದ ದೂರಿನ ತನಿಖೆಗೆ ಸಂಬಂಧಿಸಿದಂತೆ ಗುರುವಾರ ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ವಕೀಲ ಜೈ ಅನಂತ್ ದೇಹದ್ರಾಯ್ ಅವರಿಗೆ ಸಿಬಿಐ ಸೂಚಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಒಂದು ಕಾಲದಲ್ಲಿ ಮೊಯಿತ್ರಾ ಅವರ ನಿಕಟವರ್ತಿಯಾಗಿದ್ದ ದೇಹದ್ರಾಯ್ ಅವರು ಮಾಜಿ ಟಿಎಂಸಿ ಸಂಸದೆ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಆದರೆ ಮೊಯಿತ್ರಾ ತಮ್ಮ ವಿರುದ್ಧದ ಆರೋಪಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

ದೇಹದ್ರಾಯ್ ಅವರ ಹೇಳಿಕೆಯನ್ನು ದಾಖಲಿಸಲು ಗುರುವಾರ ಮಧ್ಯಾಹ್ನ 2 ಗಂಟೆಗೆ ತನಿಖಾ ಸಂಸ್ಥೆಯ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮಹುವಾ ಮೊಯಿತ್ರಾ ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣವನ್ನು ಲೋಕಪಾಲ್ ಗೆ ಉಲ್ಲೇಖಿಸಿದ ಹಿನ್ನೆಲೆಯಲ್ಲಿ ಸಿಬಿಐ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದೆ.

ಮಹುವಾ ಮೊಯಿತ್ರಾ ಅವರು ಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಲೋಕಪಾಲರಿಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com