ಅಸ್ಸಾಂ: ಅಸ್ಸಾಂ ರೈಫಲ್ಸ್ ಯೋಧನೊಬ್ಬ ತನ್ನೊಂದಿಗಿದ್ದ ಆರು ಮಂದಿ ಸಹೋದ್ಯೋಗಿಗಳ ಮೇಲೆ ಗುಂಡು ಗಾಇ ನಡೆಸಿ, ಬಳಿಕ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷಕ್ಕೆ ಸಂಬಂಧಿಸಿಲ್ಲ. ಗುಂಡಿನ ದಾಳಿಗೆ ಒಳಗಾದ ಯೋಧರನ್ನು ಚುರಾಚಂದ್ಪುರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದಕ್ಷಿಣ ಮಣಿಪುರದ ಮ್ಯಾನ್ಮಾರ್ ಗಡಿಯ ಬಳಿ ನಿಯೋಜಿಸಲಾದ ಅಸ್ಸಾಂ ರೈಫಲ್ಸ್ ಬೆಟಾಲಿಯನ್ನಲ್ಲಿ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಣಿಪುರದಲ್ಲಿ ಈಗಾಗಲೇ ಗಲಾಟೆ ನಡೆಯುತ್ತಿರುವ ಕಾರಣ ಈ ಘಟನೆಯ ಬಗ್ಗೆ ವದಂತಿ ಹಬ್ಬದಂತೆ ತಡೆಯಲು ಮತ್ತು ಸತ್ಯಾಂಶ ತಿಳಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಅಸ್ಸಾಂ ರೈಫಲ್ಸ್ನ ಎಲ್ಲಾ ಬೆಟಾಲಿಯನ್ಗಳು ಮಣಿಪುರದ ವಿವಿಧ ಸಮುದಾಯಗಳಿಗೆ ಸೇರಿದವರಾಗಿದ್ದಾರೆ ಎಂದು ಹೇಳಲಾಗಿದೆ. ತನಿಖೆ ಬಳಿಕ ಗುಂಡಿನ ದಾಳಿಗೆ ನಿಖರ ಕಾರಣ ತಿಳಿದು ಬರಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement