ಲೋಕಸಭೆ ಚುನಾವಣೆಗೆ ಬಿಜೆಪಿ ಉಸ್ತುವಾರಿ ನೇಮಕ: ರಾಜ್ಯಕ್ಕೆ ಕರ್ನಾಟಕಕ್ಕೆ ರಾಧ ಮೋಹನ್ ದಾಸ್ -ಸುಧಾಕರ್ ರೆಡ್ಡಿ!

ಲೋಕಸಭಾ ಚುನಾವಣೆಗೆ ತಯಾರಿಗಳು ಭರದಿಂದ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್‌ ಇದೀಗ ರಾಜ್ಯವಾರು ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಲೋಕಸಭಾ ಚುನಾವಣೆಗೆ ತಯಾರಿಗಳು ಭರದಿಂದ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್‌ ಇದೀಗ ರಾಜ್ಯವಾರು ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.

ಈ ಸಂಬಂಧ ಬಿಜೆಪಿ ಹೈಕಮಾಂಡ್‌ ರಾಜ್ಯಾವಾರು ಉಸ್ತುವಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕದ ಉಸ್ತುವಾರಿಯಾಗಿ ಸಂಸದ ಡಾ.ರಾಧ ಮೋಹನ್ ದಾಸ್ ಅಗ್ರವಾಲ್ ಮತ್ತು ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ  ಅವರನ್ನ ನೇಮಕ ಮಾಡಿದೆ.

ಕೇರಳಕ್ಕೆ ಪ್ರಕಾಶ್‌ ಜಾವ್ಡೇಕರ್‌, ಪುದುಚೇರಿಗೆ ನಿರ್ಮಲ್ ಕುಮಾರ್ ಸುರಾನ, ಬೈಜಯಂತ್ ಪಾಂಡಾ ಉತ್ತರ ಪ್ರದೇಶದ ನೂತನ ಉಸ್ತುವಾರಿಯಾಗಲಿದ್ದಾರೆ. ಬಿಹಾರದ ಚುನಾವಣಾ ಉಸ್ತುವಾರಿಯಾಗಿ ವಿನೋದ್ ತಾವ್ಡೆ ನೇಮಕ ಅವರನ್ನು ನೇಮಕ ಮಾಡಲಾಗಿದೆ.

ವಿಜಯಪಾಲ್ ತೋಮರ್ ಅವರನ್ನು ಒಡಿಶಾ ಹಾಗೂ ಶ್ರೀಕಾಂತ್ ಶರ್ಮಾ ಅವರನ್ನು ಹಿಮಾಚಲದ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಒಟ್ಟು 23 ಮಂದಿಯನ್ನು ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com