ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಧ್ಯಪ್ರದೇಶದಲ್ಲಿ ಹಿರಿಯ ನಾಯಕರನ್ನು ಕಣಕ್ಕಿಳಿಸುವ ಆಲೋಚನೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್‌ನಲ್ಲಿದೆ ಎಂದು ವರದಿಯಾಗಿರುವ ಸಮಯದಲ್ಲಿ ಹಾಲಿ ರಾಜ್ಯಸಭಾ ಸದಸ್ಯ ದಿಗ್ವಿಜಯ ಸಿಂಗ್ ಅವರು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ
ದಿಗ್ವಿಜಯ್ ಸಿಂಗ್
ದಿಗ್ವಿಜಯ್ ಸಿಂಗ್
Updated on

ಭೂಪಾಲ್: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಧ್ಯಪ್ರದೇಶದಲ್ಲಿ ಹಿರಿಯ ನಾಯಕರನ್ನು ಕಣಕ್ಕಿಳಿಸುವ ಆಲೋಚನೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್‌ನಲ್ಲಿದೆ ಎಂದು ವರದಿಯಾಗಿರುವ ಸಮಯದಲ್ಲಿ ಹಾಲಿ ರಾಜ್ಯಸಭಾ ಸದಸ್ಯ ದಿಗ್ವಿಜಯ ಸಿಂಗ್ ಅವರು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಏಕೆಂದರೆ 'ನಾನು ರಾಜ್ಯಸಭಾ ಸದಸ್ಯನಾಗಿದ್ದೇನೆ. ಇನ್ನೂ ಎರಡು ವರ್ಷ ಅಧಿಕಾರವಧಿ ಉಳಿದಿದೆ'. ರಾಜ್‌ಗಢ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷ ನಿರ್ಧರಿಸಲಿದೆ  ಎಂದು ಸಿಂಗ್ ತಿಳಿಸಿದ್ದಾರೆ.

ಸಿಂಗ್ 2019ರಲ್ಲಿ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಬಿಜೆಪಿಯ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ 3.65 ಲಕ್ಷ ಮತಗಳ ಅಂತರದಿಂದ ಸೋತಿದ್ದರು. ದಿಗ್ವಿಜಯ ಸಿಂಗ್ 1984 ಮತ್ತು 1991ರಲ್ಲಿ ರಾಜ್‌ಗಢ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದ ಒಟ್ಟು 29 ಸ್ಥಾನಗಳ ಪೈಕಿ ಬಿಜೆಪಿ 28 ಹಾಗೂ ಕಾಂಗ್ರೆಸ್ ಒಂದು ಸ್ಥಾನ ಗೆದ್ದಿದೆ.

ಇದೇ ಸ್ಥಾನವನ್ನು ಅವರ ಕಿರಿಯ ಸಹೋದರ ಲಕ್ಷ್ಮಣ್ ಸಿಂಗ್ ಅವರು 1994 ಮತ್ತು 2004 ರ ನಡುವೆ ಐದು ಬಾರಿ ಪ್ರತಿನಿಧಿಸಿದ್ದರು. 2019 ರ ಲೋಕಸಭೆ ಚುನಾವಣೆಯಲ್ಲಿ, ರಾಜ್ಯದಲ್ಲಿ ಅಧಿಕಾರದಲ್ಲಿದ್ದರೂ, ಕಾಂಗ್ರೆಸ್ ಎಂಪಿಯ 29 LS ಸ್ಥಾನಗಳಲ್ಲಿ ಕೇವಲ ಒಂದನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು, ಆಗಿನ ಸಿಎಂ ಕಮಲ್ ನಾಥ್ ಅವರ ಮಗ ನಕುಲ್ ನಾಥ್ ಅವರ ತಂದೆಯ ಜೇಬಿನಲ್ಲಿ ಬರೋ ಛಿಂದ್ವಾರಾದಿಂದ ವಿಜಯಶಾಲಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com