ED ಗೆ ಸಿಗದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್, ದೆಹಲಿ ನಿವಾಸದಿಂದ ಬಿಎಂಡಬ್ಲ್ಯು ಕಾರು ವಶಕ್ಕೆ!

ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಅವರ ದೆಹಲಿ ನಿವಾಸದಿಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೆಲವು ದಾಖಲೆಗಳು ಹಾಗೂ ಬಿಎಂಡಬ್ಲ್ಯು ಕಾರನ್ನು ವಶಕ್ಕೆ ಪಡೆದಿದ್ದಾರೆ. 
ಹೇಮಂತ್ ಸೊರೇನ್
ಹೇಮಂತ್ ಸೊರೇನ್
Updated on

ದೆಹಲಿ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಅವರ ದೆಹಲಿ ನಿವಾಸದಿಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೆಲವು ದಾಖಲೆಗಳು ಹಾಗೂ ಬಿಎಂಡಬ್ಲ್ಯು ಕಾರನ್ನು ವಶಕ್ಕೆ ಪಡೆದಿದ್ದಾರೆ. 

ವಶಕ್ಕೆ ಪಡೆದ ಕಾರು ಹಾಗೂ ಇನ್ನಿತರ ಬೆಲೆ ಬಾಳುವ ವಸ್ತುಗಳನ್ನು ಸೊರೇನ್ ಅಕ್ರಮ ಹಣ ಬಳಸಿ ಖರೀದಿಸಿದ್ದಾರೆ ಎಂದು ED ಅಧಿಕಾರಿಗಳು ಹೇಳಿದ್ದಾರೆ.

ಸರ್ಕಾರಿ ಭೂಮಿಯ ಮಾಲಿಕತ್ವವನ್ನು ಬದಲಾವಣೆ ಮಾಡುವುದರಲ್ಲಿ ಬೃಹತ್ ಜಾಲವನ್ನೊಳಗೊಂಡ 600 ಕೋಟಿ ರೂಪಾಯಿ ಮೊತ್ತದ ಹಗರಣ ಇದಾಗಿದೆ. ಈ ಸರ್ಕಾರಿ ಭೂಮಿಯನ್ನು ಕ್ರಮೇಣ ಬಿಲ್ಡರ್ ಗಳಿಗೆ ಮಾರಟ ಮಾಡಲಾಗಿದೆ ಎಂದು ಆರೋಪಿಸಿರುವ ಜಾರಿ ನಿರ್ದೇಶನಾಲಯ, ಪ್ರಕರಣದ ಸಂಬಂಧ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಗೆ 7 ಬಾರಿ ನೊಟೀಸ್ ಜಾರಿಗೊಳಿಸಿತ್ತು. ಆದರೆ ಈ ನೊಟೀಸ್ ಗಳನ್ನು ಸೊರೇನ್ ನಿರ್ಲಕ್ಷ್ಯ ಮಾಡಿದ್ದು, ಜಾರಿ ನಿರ್ದೇಶನಾಲಯದ ಸಮನ್ಸ್ ನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ಪ್ರಕರಣದಲ್ಲಿ ಸೊರೇನ್ ಬಂಧನವಾಗುವ ಸಾಧ್ಯತೆ ಹೆಚ್ಚಾಗಿದೆ. ಬಂಧಿಸುವುದಕ್ಕೂ ಮುನ್ನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೊರೇನ್ ಅವರ ಹೇಳಿಕೆ ಪಡೆಯುವುದು ಮುಖ್ಯವಾಗಿದೆ. ಆದರೆ ಕೇಂದ್ರೀಯ ತನಿಖಾ ಸಂಸ್ಥೆಗೆ  ಹೇಮಂತ್ ಸೊರೇನ್ ಅವರೆಲ್ಲಿದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಹೇಮಂತ್ ಸೊರೇನ್ ಅವರ ಹೇಳಿಕೆ ದಾಖಲಿಸಿಕೊಳ್ಳುವುದಕ್ಕಾಗಿ ದೆಹಲಿ ಹಾಗೂ ಜಾರ್ಖಂಡ್ ನ ನಿವಾಸಗಳಲ್ಲಿ ED ಅಧಿಕಾರಿಗಳು ತಡರಾತ್ರಿವರೆಗೂ ಕಾದು ವಾಪಸ್ಸಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com