ನೀಟ್ ಪರೀಕ್ಷೆ ಅಕ್ರಮ: ಜಾರ್ಖಂಡ್ನಲ್ಲಿ ಪ್ರಮುಖ ಸಂಚುಕೋರನ ಬಂಧಿಸಿದ ಸಿಬಿಐ!
ರಾಂಚಿ: ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣದ ಸಂಚುಕೋರ ಎನ್ನಲಾದ ಅಮನ್ ಸಿಂಗ್ ನನ್ನು ಸಿಬಿಐ ಬುಧವಾರ ಜಾರ್ಖಂಡ್ ನ ಧನ್ ಬಾದ್ ನಿಂದ ಬಂಧಿಸಿದೆ. NEET-UG ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯು ಏಳನೇ ಆರೋಪಿಯನ್ನು ಬಂಧಿಸಿದೆ.
ಭಾನುವಾರ ಗುಜರಾತ್ನ ಗೋಧ್ರಾ ಜಿಲ್ಲೆಯ ಖಾಸಗಿ ಶಾಲೆಯೊಂದರ ಮಾಲೀಕರನ್ನು ಸಿಬಿಐ ಬಂಧಿಸಿದ್ದು, ಪ್ರಕರಣದಲ್ಲಿ ಆರನೇ ಬಂಧನವಾಗಿತ್ತು. ಪೇಪರ್ ಸೋರಿಕೆಯಲ್ಲಿ ಭಾಗಿಯಾಗಿರುವ ಜಾರ್ಖಂಡ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಡ್ಯೂಲ್ ಬಗ್ಗೆ ಸಿಬಿಐ ಗುಪ್ತಚರ ಮಾಹಿತಿ ಪಡೆದ ನಂತರ ಸಿಂಗ್ ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಜಾರಿಬಾಗ್ನಲ್ಲಿರುವ ಓಯಸಿಸ್ ಶಾಲೆಯ ಪ್ರಾಂಶುಪಾಲರು ಮತ್ತು NEET ಅಭ್ಯರ್ಥಿಗಳಿಗೆ ತಂಗಲು ಫ್ಲಾಟ್ ಒದಗಿಸಿದ ಇಬ್ಬರು ವ್ಯಕ್ತಿಗಳನ್ನು ಏಜೆನ್ಸಿ ಈ ಹಿಂದೆ ಬಂಧಿಸಿತ್ತು. ಅಲ್ಲಿಂದ ಸುಟ್ಟ ಪ್ರಶ್ನೆಪತ್ರಿಕೆಗಳನ್ನು ಬಿಹಾರ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಸಿಬಿಐ ಆರು ಎಫ್ಐಆರ್ಗಳನ್ನು ದಾಖಲಿಸಿದೆ. ಬಿಹಾರದಲ್ಲಿ ದಾಖಲಾದ ಎಫ್ಐಆರ್ ಪೇಪರ್ ಸೋರಿಕೆಗೆ ಸಂಬಂಧಿಸಿದೆ, ಆದರೆ ಗುಜರಾತ್ ಮತ್ತು ರಾಜಸ್ಥಾನದಲ್ಲಿ ದಾಖಲಾಗಿರುವ ಎಫ್ಐಆರ್ಗಳು ವಂಚನೆಗೆ ಸಂಬಂಧಿಸಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಜಾರ್ಖಂಡ್ನ ಪತ್ರಕರ್ತನನ್ನು ಏಜೆನ್ಸಿ ಬಂಧಿಸಿತ್ತು. ಬಂಧಿತ ವ್ಯಕ್ತಿಯನ್ನು ಜಮಾಲುದ್ದೀನ್ ಅನ್ಸಾರಿ ಎಂದು ಗುರುತಿಸಲಾಗಿದೆ. ರಾಜ್ಯದಲ್ಲಿ ಹಿಂದಿ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದಾನೆ. ಪ್ರಾಂಶುಪಾಲ ಎಹ್ಸಾನುಲ್ ಹಕ್ ಮತ್ತು ವೈಸ್ಗೆ ಸಹಾಯ ಮಾಡಲು ಪ್ರಯತ್ನಿಸಿದ ಆರೋಪದ ಮೇಲೆ ಶುಕ್ರವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಂಚಮಹಲ್ ಜಿಲ್ಲೆಯ ಗೋಧ್ರಾ ಬಳಿಯಿರುವ ಜೈ ಜಲರಾಮ್ ಶಾಲೆಯ ಮಾಲೀಕ ದೀಕ್ಷಿತ್ ಪಟೇಲ್, ಅಭ್ಯರ್ಥಿಗಳ ಪರೀಕ್ಷೆಯಲ್ಲಿ ಅಂಕಗಳನ್ನು ಹೆಚ್ಚಿಸುವ ಭರವಸೆ ನೀಡಿ 5 ಲಕ್ಷದಿಂದ 10 ಲಕ್ಷದವರೆಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಬಂಧಿಸಲಾಗಿದೆ. ಪಂಚಮಹಲ್ ಜಿಲ್ಲೆಯ ಗೋದ್ರಾ ಬಳಿ ಇರುವ ಜೈ ಜಲರಾಮ್ ಶಾಲೆಯ ಮಾಲೀಕ ದೀಕ್ಷಿತ್ ಪಟೇಲ್ ಅವರನ್ನು ಅವರ ನಿವಾಸದಿಂದ ಬಂಧಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ