ಅಮರನಾಥ Bus Brake Fail: ಚಲಿಸುತ್ತಿದ್ದ ಬಸ್ ನಿಂದಲೇ ಜಿಗಿದ ಯಾತ್ರಾರ್ಥಿಗಳು, ಪ್ರಾಣ ಉಳಿಸಿದ ಸೈನಿಕರು!

ಪವಿತ್ರ ಅಮರನಾಥ್ ಯಾತ್ರೆಯಿಂದ ಹಿಂದಿರುಗವಾಗ ಬಸ್ ನ ಬ್ರೇಕ್ ಫೇಲ್ಯೂರ್ ಆದ ಪರಿಣಾಮ ಬಸ್ ನೊಳಗಿದ್ದ ಯಾತ್ರಾರ್ಥಿಗಳು ಚಲಿಸುತ್ತಿದ್ದ ಬಸ್ ನಿಂದಲೇ ಕೆಳಗೆ ಜಿಗಿದಿರುವ ಘಟನೆ ವರದಿಯಾಗಿದೆ.
Ten Injured As Amarnath Yatra Pilgrims Jump Off Moving Bus
ಬ್ರೇಕ್ ಫೇಲ್ಯೂರ್ ಆದ ಬಸ್
Updated on

ಕಟ್ರಾ: ಪವಿತ್ರ ಅಮರನಾಥ್ ಯಾತ್ರೆಯಿಂದ ಹಿಂದಿರುಗವಾಗ ಬಸ್ ನ ಬ್ರೇಕ್ ಫೇಲ್ಯೂರ್ ಆದ ಪರಿಣಾಮ ಬಸ್ ನೊಳಗಿದ್ದ ಯಾತ್ರಾರ್ಥಿಗಳು ಚಲಿಸುತ್ತಿದ್ದ ಬಸ್ ನಿಂದಲೇ ಕೆಳಗೆ ಜಿಗಿದಿರುವ ಘಟನೆ ವರದಿಯಾಗಿದೆ.

ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ಅಮರನಾಥ ಯಾತ್ರೆ ಮುಗಿಸಿ ಪಂಜಾಬ್​ನ ಹೋಶಿಯಾರ್​ಪುರಕ್ಕೆ ಹಿಂದಿರುಗುತ್ತಿರುವಾಗ ಬಸ್​ನ ಬ್ರೇಕ್​ ಫೇಲ್​ ಆದ ಪರಿಣಾಮ ಯಾತ್ರಿಕರು ಬಸ್​ನಿಂದ ಹಾರಿ ಗಾಯಗೊಂಡಿದ್ದಾರೆ.

ಈ ಕುರಿತು ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Ten Injured As Amarnath Yatra Pilgrims Jump Off Moving Bus
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ KSRTC ಬಸ್; 8 ಮಂದಿಗೆ ಗಾಯ

ಪಂಜಾಬ್‌ನ ಹೋಶಿಯಾರ್‌ಪುರಕ್ಕೆ ಹಿಂತಿರುಗುತ್ತಿದ್ದ ಸುಮಾರು 44 ಯಾತ್ರಾರ್ಥಿಗಳನ್ನು ಹೊತ್ತಿದ್ದ ಬಸ್, ಬ್ರೇಕ್ ವೈಫಲ್ಯದಿಂದಾಗಿ ಬನಿಹಾಲ್ ಬಳಿಯ ನಚ್ಲಾನಾದಲ್ಲಿ ನಿಲ್ಲಿಸಲು ವಿಫಲವಾಗಿತ್ತು.

ಚಲಿಸುತ್ತಿದ್ದ ಬಸ್​ನಿಂದ ಹತ್ತು ಮಂದಿ ಕೆಳಗೆ ಹಾರಿರುವ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ, ಅದರಲ್ಲಿ ಮೂವರು ಮಹಿಳೆಯರು ಒಂದು ಮಗು ಕೂಡ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಸ್ ಹಿಂದೆ ಸ್ಥಳೀಯರು, ಸೈನಿಕರು ಮತ್ತು ಪೊಲೀಸರು ಓಡಿ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.

ಬಸ್ ನಿಲ್ಲಿಸಿ ಜನರ ಪ್ರಾಣ ಉಳಿಸಿದ ಭಾರತೀಯ ಸೇನೆ ಸೈನಿಕರು

ಇನ್ನು ಚಲಿಸುತ್ತಿದ್ದ ವಾಹನದಿಂದ ಯಾತ್ರಾರ್ಥಿಗಳು ಜಿಗಿಯುತ್ತಿರುವುದನ್ನು ಗಮನಿಸಿದ ಸೇನಾ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ಬಸ್‌ನ ಟೈರ್‌ಗಳ ಕೆಳಗೆ ಕಲ್ಲುಗಳನ್ನು ಇಟ್ಟು ಬಸ್ ನದಿಗೆ ಬೀಳದಂತೆ ತಡೆದಿದ್ದಾರೆ.

ಅಲ್ಲದೆ ತಕ್ಷಣ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆ ಮೂಲಕ ಜಮ್ಮು-ಕಾಶ್ಮೀರ ಹೆದ್ದಾರಿಯಲ್ಲಿ ಸಂಭಾವ್ಯ ಅಪಘಾತವನ್ನು ಸೈನಿಕರು ತಪ್ಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com