ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ದೆಹಲಿಗೆ ತೆರಳಿದ ಅಮೃತಪಾಲ್ ಸಿಂಗ್

ಇತ್ತೀಚಿನ 2024 ರ ಲೋಕಸಭಾ ಚುನಾವಣೆಯಲ್ಲಿ, ಸಿಂಗ್ ಪಂಜಾಬ್‌ನ ಖದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
ಅಮೃತಪಾಲ್ ಸಿಂಗ್
ಅಮೃತಪಾಲ್ ಸಿಂಗ್
Updated on

ದಿಬ್ರುಗಢ: ಜೈಲಿನಲ್ಲಿರುವ ‘ವಾರಿಸ್ ಪಂಜಾಬ್ ದೇ’ ಸಂಘಟನೆಯ ಮುಖ್ಯಸ್ಥ ಅಮೃತಪಾಲ್ ಸಿಂಗ್ ಅವರು ಶುಕ್ರವಾರ ಬೆಳಗ್ಗೆ ಅಸ್ಸಾಂನ ದಿಬ್ರುಗಢ ಜೈಲಿನಿಂದ ಪಂಜಾಬ್ ಪೊಲೀಸರ ಭದ್ರತೆಯೊಂದಿಗೆ ಹೊರಗೆ ಬಂದಿದ್ದು, ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿ ಲೋಕಸಭೆಯ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ಇತ್ತೀಚಿನ 2024 ರ ಲೋಕಸಭಾ ಚುನಾವಣೆಯಲ್ಲಿ, ಸಿಂಗ್ ಪಂಜಾಬ್‌ನ ಖದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಅಮೃತಪಾಲ್ ಸಿಂಗ್ ಅವರು 1,97,120 ಮತಗಳ ಅಂತರದಿಂದ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಕುಲ್ಬೀರ್ ಸಿಂಗ್ ಝಿರಾ ಅವರನ್ನು ಸೋಲಿಸಿದ್ದರು.

ಅಮೃತಪಾಲ್ ಸಿಂಗ್
ತಲೆಮರೆಸಿಕೊಂಡಿರುವ ಖಲಿಸ್ಥಾನಿ ನಾಯಕ ಅಮೃತಪಾಲ್ ಸಿಂಗ್ ಆಪ್ತ ಪಾಪಲ್‌ಪ್ರೀತ್ ಸಿಂಗ್ ಬಂಧನ

ಖಲಿಸ್ತಾನಿ ಉಗ್ರಗಾಮಿ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆಯನ್ನು ಹತ್ಯೆಗೈದ ನಂತರ ಅಮೃತಪಾಲ್ ಸಿಂಗ್ ಅವರನ್ನು ಕಳೆದ ವರ್ಷ ಏಪ್ರಿಲ್ 23 ರಂದು ಬಂಧಿಸಲಾಗಿತ್ತು. ನಂತರ ಅವರ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಕೇಸ್ ದಾಖಲಿಸಲಾಗಿದೆ.

ಪ್ರಸ್ತುತ ಅಸ್ಸಾಂನ ದಿಬ್ರುಗಢ ಜೈಲಿನಲ್ಲಿರುವ ‘ವಾರಿಸ್ ಪಂಜಾಬ್ ದೇ’ ಸಂಘಟನೆಯ ಮುಖ್ಯಸ್ಥರಿಗೆ ಪ್ರಮಾಣವಚನ ಸ್ವೀಕರಿಸಲು ನಾಲ್ಕು ದಿನಗಳ ಪೆರೋಲ್ ನೀಡಲಾಗಿದೆ ಎಂದು ಅಮೃತಸರದ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com