ಮಹಾರಾಷ್ಟ್ರ: ಥಾಣೆ ಅಣೆಕಟ್ಟಿನ ಬಳಿ ಸಿಲುಕಿದ್ದ 5 ಮಕ್ಕಳ ರಕ್ಷಣೆ

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಅಗ್ನಿಶಾಮಕ ದಳದ ತಂಡಗಳು, ಏಡಿ ಹಿಡಿಯುವ ವೇಳೆ ಬೆಟ್ಟದಲ್ಲಿ ಸಿಲುಕಿದ್ದ ಮಕ್ಕಳನ್ನು ರಕ್ಷಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ
Updated on

ಥಾಣೆ: ಮಹಾರಾಷ್ಟ್ರದ ಥಾಣೆಯ ಮುಂಬ್ರಾ ಖಾದಿ ಮೆಷಿನ್ ಅಣೆಕಟ್ಟಿನ ಸಮೀಪ ಬೆಟ್ಟದಲ್ಲಿ ಸಿಲುಕಿದ್ದ ಐವರು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಅಗ್ನಿಶಾಮಕ ದಳದ ತಂಡಗಳು, ಏಡಿ ಹಿಡಿಯುವ ವೇಳೆ ಬೆಟ್ಟದಲ್ಲಿ ಸಿಲುಕಿದ್ದ ಮಕ್ಕಳನ್ನು ರಕ್ಷಿಸಿದ್ದಾರೆ.

ನಿನ್ನೆ ರಾತ್ರಿ 8:30ರ ಸುಮಾರಿಗೆ ಕೆಲವು ಮಕ್ಕಳು ಬೆಟ್ಟದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ನಮಗೆ ಕರೆ ಬಂದಿತ್ತು ಎಂದು ಅಗ್ನಿಶಾಮಕ ಅಧಿಕಾರಿ ಗಣೇಶ ಕೇದಾರೆ ತಿಳಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ
ಮಹಾರಾಷ್ಟ್ರ: ಭೂಶಿ ಅಣೆಕಟ್ಟು ಬಳಿ ಜಲಪಾತದಲ್ಲಿ ಮುಳುಗಿ ಐವರು ಸಾವು ಶಂಕೆ

ನಮ್ಮ ತಂಡವು ತಕ್ಷಣ ಸ್ಥಳಕ್ಕೆ ತಲುಪಿದ್ದು, ಎಲ್ಲಾ ಐದು ಮಕ್ಕಳನ್ನು ರಕ್ಷಿಸಲಾಗಿದೆ ಮತ್ತು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಕೇದಾರೆ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com