ಸಿಬಿಐ ತನಿಖೆ ವಿರುದ್ಧ ಪಶ್ಚಿಮ ಬಂಗಾಳದ ಮೊಕದ್ದಮೆ ಸಮರ್ಥನೀಯ: ಕೇಂದ್ರದ ಪ್ರಾಥಮಿಕ ಆಕ್ಷೇಪಣೆ ತಳ್ಳಿಹಾಕಿದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳ ಸರ್ಕಾರ ಮತ್ತು ಕೇಂದ್ರ ಸರ್ಕಾರದ ವಿವರವಾದ ವಾದವನ್ನು ಆಲಿಸಿದ ನಂತರ ತೀರ್ಪು ಕಾಯ್ದಿರಿಸಿದ ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ಇಂದು ತೀರ್ಪು ಪ್ರಕಟಿಸಿತು.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on

ನವದೆಹಲಿ: ರಾಜ್ಯದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳ ತನಿಖೆಯನ್ನು ಸಿಬಿಐ ಕಾನೂನಿನ ಪ್ರಕಾರ ಪೂರ್ವಾನುಮತಿ ಪಡೆಯದೆ ಮುಂದುವರಿಯುತ್ತಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಸರಕಾರದ ಮೊಕದ್ದಮೆಯನ್ನು ಸಮರ್ಥನೀಯ ಎಂದು ಸುಪ್ರೀಂ ಕೋರ್ಟ್ ಬುಧವಾರ ತನ್ನ ತೀರ್ಪಿನಲ್ಲಿ ಪರಿಗಣಿಸಿದೆ. ಇದರ ಜೊತೆಗೆ ಕೇಂದ್ರ ಸರ್ಕಾರದ ಪ್ರಾಥಮಿಕ ಆಕ್ಷೇಪಣೆಗಳನ್ನು ತಳ್ಳಿಹಾಕಿದ್ದು, ಇದರಿಂದ ಕೇಂದ್ರಕ್ಕೆ ಹಿನ್ನಡೆಯಾಗಿದೆ.

ಪಶ್ಚಿಮ ಬಂಗಾಳ ಸರ್ಕಾರ ಮತ್ತು ಕೇಂದ್ರ ಸರ್ಕಾರದ ವಿವರವಾದ ವಾದವನ್ನು ಆಲಿಸಿದ ನಂತರ ತೀರ್ಪು ಕಾಯ್ದಿರಿಸಿದ ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ಇಂದು ತೀರ್ಪು ಪ್ರಕಟಿಸಿತು.

ಪ್ರಕರಣದ ವಾದಗಳನ್ನು ಪರಿಗಣಿಸಿ, ನಾವು DSPE (ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ) ಕಾಯಿದೆಯ ಯೋಜನೆ ಮತ್ತು ಸುಪ್ರೀಂ ಕೋರ್ಟ್ ನಿಯಮಗಳನ್ನು ಪರಿಗಣಿಸಿದ್ದೇವೆ. ನಾವು ಮೊಕದ್ದಮೆಯ ನಿರ್ವಹಣೆಯ ಬಗ್ಗೆ ಕೇಂದ್ರದ ಪ್ರಾಥಮಿಕ ಆಕ್ಷೇಪಣೆಗಳನ್ನು ತಿರಸ್ಕರಿಸುತ್ತೇವೆ ಎಂದು ನ್ಯಾಯಮೂರ್ತಿ ಗವಾಯಿ ಅವರು ತೀರ್ಪಿನಲ್ಲಿ ತಿಳಿಸಿದ್ದಾರೆ.

ರಾಜ್ಯವು ಒಪ್ಪಿಗೆಯನ್ನು ಹಿಂತೆಗೆದುಕೊಂಡರೂ ಸಿಬಿಐ ತನಿಖೆ ಪ್ರಕರಣಗಳ ಕುರಿತು ಪಶ್ಚಿಮ ಬಂಗಾಳ ಸರ್ಕಾರದ ಮೊಕದ್ದಮೆ ತನ್ನದೇ ಆದ ಅರ್ಹತೆಯ ಮೇಲೆ ಕಾನೂನಿನ ಪ್ರಕಾರ ಮುಂದುವರಿಯುತ್ತದೆ ಎಂದು ತೀರ್ಪಿನಲ್ಲಿ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್
ಮಮತಾ ವಿರುದ್ಧ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ಮಾನನಷ್ಟ ಮೊಕದ್ದಮೆ ದಾಖಲು

ಸುಪ್ರೀಂ ಕೋರ್ಟ್ ಮೊಕದ್ದಮೆಯನ್ನು ಸಮರ್ಥನೀಯ ಎಂದು ಪರಿಗಣಿಸಿದ್ದರಿಂದ ಈ ತೀರ್ಪು ಕೇಂದ್ರಕ್ಕೆ ಹಿನ್ನಡೆಯಾಗಿದೆ. ಈ ಮಧ್ಯೆ ಕೇಂದ್ರ ಸರ್ಕಾರವು ಬಿಐಯನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಆರೋಪಿಸಿದೆ.

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರದ ಪ್ರಕರಣಗಳಲ್ಲಿ ಸಿಬಿಐ ಅನೇಕ ಎಫ್‌ಐಆರ್‌ಗಳನ್ನು ದಾಖಲಿಸಿದೆ, ಅದನ್ನು ಅಲ್ಲಿನ ಸರ್ಕಾರ ತೀವ್ರವಾಗಿ ಆಕ್ಷೇಪಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com