ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧದ ಆರೋಪಗಳ ತನಿಖೆಗೆ ಸಮಿತಿ ರಚಿಸಿದ ಕೇಂದ್ರ

ಭಾರತೀಯ ಆಡಳಿತ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಪೂಜಾ ಖೇಡ್ಕರ್ ಅವರು ನಕಲಿ ಅಂಗವೈಕಲ್ಯ ಮತ್ತು ಇತರೆ ಹಿಂದುಳಿದ ವರ್ಗದ(ಒಬಿಸಿ) ಪ್ರಮಾಣಪತ್ರಗಳನ್ನು ಸಲ್ಲಿಸಿದ್ದಾರೆ.
ಪೂಜಾ ಖೇಡ್ಕರ್
ಪೂಜಾ ಖೇಡ್ಕರ್
Updated on

ನವದೆಹಲಿ: ಮಹಾರಾಷ್ಟ್ರದ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ವಿರುದ್ಧದ ಆರೋಪಗಳ ತನಿಖೆಗೆ ಕೇಂದ್ರ ಸರ್ಕಾರ ಗುರುವಾರ ಏಕಸದಸ್ಯ ಸಮಿತಿ ರಚಿಸಿದೆ ಎಂದು ಮೂಲಗಳು ತಿಳಿಸಿವೆ.

ಸಿಬ್ಬಂದಿ ಮತ್ತು ತರಬೇತಿ ಇಲಾಖೆ(ಡಿಒಪಿಟಿ) ಹೆಚ್ಚುವರಿ ಕಾರ್ಯದರ್ಶಿ ಈ ಬಗ್ಗೆ ತನಿಖೆ ನಡೆಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಭಾರತೀಯ ಆಡಳಿತ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಪೂಜಾ ಖೇಡ್ಕರ್ ಅವರು ನಕಲಿ ಅಂಗವೈಕಲ್ಯ ಮತ್ತು ಇತರೆ ಹಿಂದುಳಿದ ವರ್ಗದ(ಒಬಿಸಿ) ಪ್ರಮಾಣಪತ್ರಗಳನ್ನು ಸಲ್ಲಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಪೂಜಾ ಖೇಡ್ಕರ್
ತಮ್ಮ ಸ್ವಂತ ಆಡಿ ಕಾರಿಗೆ ಸೈರನ್, ಸರ್ಕಾರಿ ಫಲಕ ಹಾಕಿದ IAS ಅಧಿಕಾರಿ ಪೂಜಾ ಖೇಡ್ಕರ್ ಎತ್ತಂಗಡಿ

ಅಧಿಕಾರ ದುರುಪಯೋಗ ಆರೋಪದ ಮೇಲೆ ಪೂಜಾ ಖೇಡ್ಕರ್ ಅವರನ್ನು ಸೋಮವಾರ ಪುಣೆಯಿಂದ ವಾಶಿಮ್‌ಗೆ ವರ್ಗಾವಣೆ ಮಾಡಲಾಗಿದ್ದು, ಇಂದು ವಿದರ್ಭ ಪ್ರದೇಶದ ವಾಶಿಮ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯಕ ಕಲೆಕ್ಟರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com