ಬಿಹಾರಕ್ಕೆ ವಿಶೇಷ ಸ್ಥಾನಮಾನ ಬೇಡಿಕೆಯನ್ನು ಬಿಗಿಗೊಳಿಸುತ್ತೇವೆ: ನಿತೀಶ್ ಆಪ್ತ

ಮಾಜಿ ಐಎಎಸ್ ಅಧಿಕಾರಿ ವರ್ಮಾ ಅವರು ನಿತೀಶ್ ಕುಮಾರ್ ಮುಂದಿನ ಉತ್ತರಾಧಿಕಾರಿ ಎಂಬಂತಹ ಮಾತುಗಳು ಕೇಳಿಬರುತ್ತಿವೆ. ಈ ನಡುವೆ ಬಿಹಾರ ವಿಶೇಷ ಸ್ಥಾನಮಾನ ಕುರಿತು ಅವರ ಹೇಳಿಕೆ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.
ನಿತೀಶ್ ಕುಮಾರ್
ನಿತೀಶ್ ಕುಮಾರ್
Updated on

ಪಾಟ್ನಾ: ಬಿಹಾರಕ್ಕೆ ವಿಶೇಷ ಸ್ಥಾನಮಾನ ಅಥವಾ ಕೇಂದ್ರದ ವಿಶೇಷ ಅನುದಾನ ಬೇಡಿಕೆಯನ್ನು ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಪ್ತ ಮನೀಶ್ ಕುಮಾರ್ ವರ್ಮಾ ಗುರುವಾರ ಹೇಳಿದ್ದಾರೆ. ಜೆಡಿಯು ಸೇರ್ಪಡೆಯಾದ ಎರಡನೇ ದಿನಗಳಲ್ಲಿ ಅವರಿಗೆ ಪಕ್ಷದಲ್ಲಿ ಪ್ರಮುಖ ಸ್ಥಾನಮಾನ ನೀಡಲಾಗಿದೆ.

ನಿತೀಶ್ ಕುಮಾರ್
ಬಿಹಾರಕ್ಕೆ 'ವಿಶೇಷ ಸ್ಥಾನಮಾನ' ನೀಡುವಂತೆ ಕೇಂದ್ರಕ್ಕೆ ಜೆಡಿಯು ಒತ್ತಾಯ; ಕಾರ್ಯಾಧ್ಯಕ್ಷರಾಗಿ ಸಂಜಯ್ ಝಾ ನೇಮಕ

ಲೋಕಸಭೆ ಚುನಾವಣೆಯಲ್ಲಿ ಜೆಡಿಯು ಉತ್ತಮ ಸಾಧನೆಯನ್ನು ಉಲ್ಲೇಖಿಸಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯು ಕುಮಾರ್ ಅವರ ನೇತೃತ್ವದಲ್ಲಿ ನಡೆಯಬೇಕು ಎಂಬುದು ಪಕ್ಷದ ನಂಬಿಕೆಯಾಗಿದೆ. ಈ ವಿಷಯದ ಬಗ್ಗೆ ಇದುವರೆಗೆ ಯಾವುದೇ ಅಭಿಪ್ರಾಯ ಬಂದಿಲ್ಲ.ಆದಾಗ್ಯೂ, ಮುಂದಿನ ವರ್ಷಾಂತ್ಯದಲ್ಲಿ ನಡೆಯಲಿರುವ ಚುನಾವಣೆಯ ಸನಿಹದಲ್ಲಿ ವಿಶೇಷ ಸ್ಥಾನಮಾನ ನೀಡಿಕೆ ಕುರಿತು ಎನ್ ಡಿಎ ಮೈತ್ರಿಕೂಟ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದರು.

ಬಿಹಾರದಲ್ಲಿ ಎನ್ ಡಿಎ ಮೈತ್ರಿಕೂಟ ಬಿಜೆಪಿ, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ, ಜೆಡಿಯು ಮತ್ತಿತರ ಇತರ ಕೆಲವು ಸಣ್ಣ ಪಕ್ಷಗಳನ್ನು ಒಳಗೊಂಡಿದೆ. ಮಾಜಿ ಐಎಎಸ್ ಅಧಿಕಾರಿ ವರ್ಮಾ ಅವರು ನಿತೀಶ್ ಕುಮಾರ್ ಮುಂದಿನ ಉತ್ತರಾಧಿಕಾರಿ ಎಂಬಂತಹ ಮಾತುಗಳು ಕೇಳಿಬರುತ್ತಿವೆ. ಈ ನಡುವೆ ಬಿಹಾರ ವಿಶೇಷ ಸ್ಥಾನಮಾನ ಕುರಿತು ಅವರ ಹೇಳಿಕೆ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com