Lightning strikes: ಬಿಹಾರದಲ್ಲಿ ಸಿಡಿಲಿಗೆ 21 ಮಂದಿ ಸಾವು

ಬಿಹಾರದ ಮಧುಬನಿಯಲ್ಲಿ ಗರಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್‌ನಲ್ಲಿ ನಾಲ್ಕು, ರಾಜಧಾನಿ ಪಾಟ್ನಾದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
lightning strike incidents in Bihar
ಬಿಹಾರದಲ್ಲಿ ಸಿಡಿಲು
Updated on

ಪಾಟ್ನಾ: ಬಿಹಾರದಲ್ಲಿ ಸಿಡಿಲಿಗೆ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬಿಹಾರ ಮುಖ್ಯಮಂತ್ರಿ ಕಚೇರಿ ಶುಕ್ರವಾರ ನೀಡಿರುವ ಮಾಹಿತಿ ಅನ್ವಯ ಕಳೆದ 24 ಗಂಟೆಗಳಲ್ಲಿ ಬಿಹಾರದಾದ್ಯಂತ ಸಿಡಿಲು ಬಡಿತ-ಸಂಬಂಧಿತ ಘಟನೆಗಳಲ್ಲಿ ಒಟ್ಟು 21 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಬಿಹಾರದ ಮಧುಬನಿಯಲ್ಲಿ ಗರಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್‌ನಲ್ಲಿ ನಾಲ್ಕು, ರಾಜಧಾನಿ ಪಾಟ್ನಾದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಅಲ್ಲದೆ ರೋಹ್ತಾಸ್, ಭೋಜ್‌ಪುರ, ಕೈಮೂರ್, ಸರನ್, ಜೆಹಾನಾಬಾದ್, ಗೋಪಾಲ್‌ಗಂಜ್, ಸುಪೌಲ್, ಲಖಿಸಾರೈ ಮತ್ತು ಮಾಧೇಪುರ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಿಡಿಲು ಬಡಿತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ ಎಂದು ಸಿಎಂಒ ಹೇಳಿಕೆಯಲ್ಲಿ ತಿಳಿಸಿದೆ.

lightning strike incidents in Bihar
ಉತ್ತರ ಪ್ರದೇಶ: ಸಿಡಿಲು ಬಡಿದು ಒಂದೇ ದಿನ 38 ಮಂದಿ ಸಾವು!

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೃತರಿಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಇದೇ ವೇಳೆ ಪ್ರತಿಕೂಲ ಹವಾಮಾನದ ಸಂದರ್ಭದಲ್ಲಿ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಕಚೇರಿ ಜನರಿಗೆ ಮನವಿ ಮಾಡಿದೆ.

ಅಲ್ಲದೆ ಅಗತ್ಯವಿಲ್ಲದಿದ್ದರೆ ಹೊರಗಡೆ ಹೋಗುವುದನ್ನು ತಪ್ಪಿಸಿ ಮತ್ತು ಕಾಲಕಾಲಕ್ಕೆ ವಿಪತ್ತು ನಿರ್ವಹಣಾ ಇಲಾಖೆ ನೀಡುವ ಸಲಹೆಗಳನ್ನು ಅನುಸರಿಸಿ ಎಂದು ಕರೆ ನೀಡಿದೆ.

ಕಳೆದ ಕೆಲವು ವಾರಗಳಿಂದ ಬಿಹಾರದಲ್ಲಿ ಮಳೆ ಮತ್ತು ಭಾರಿ ಗುಡುಗು ಸಹಿತ ಮಳೆಯಾಗುತ್ತಿದ್ದು, ಈ ತಿಂಗಳ ಆರಂಭದಿಂದ ಸುಮಾರು 70 ಜನರು ಸಿಡಿಲು-ಸಂಬಂಧಿತ ಘಟನೆಗಳಿಗೆ ಬಲಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com