ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ ಸಿಜೆಐ ಚಂದ್ರಚೂಡ್

ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಚಂದ್ರಚೂಡ್ ಅವರನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ನಿತೀಶ್ ಕುಮಾರ್ ಅವರು ಬರಮಾಡಿಕೊಂಡರು.
ಡಿವೈ ಚಂದ್ರಚೂಡ್
ಡಿವೈ ಚಂದ್ರಚೂಡ್
Updated on

ಅಯೋಧ್ಯೆ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿ ವೈ ಚಂದ್ರಚೂಡ್ ಅವರು ಶುಕ್ರವಾರ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಜಿಲ್ಲಾಡಳಿತದ ಪ್ರಕಾರ, ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಚಂದ್ರಚೂಡ್ ಅವರನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ನಿತೀಶ್ ಕುಮಾರ್ ಅವರು ಬರಮಾಡಿಕೊಂಡರು.

ನಂತರ ಸಿಜೆಐ ಚಂದ್ರಚೂಡ್ ಅವರು ಹನುಮಾನ್‌ಗರ್ಹಿ ದೇವಸ್ಥಾನ ಮತ್ತು ರಾಮ ಮಂದಿರಕ್ಕೆ ಭೇಟಿ ನೀಡಿದರು.

ಡಿವೈ ಚಂದ್ರಚೂಡ್
24 ವರ್ಷಗಳ ವೃತ್ತಿ ಜೀವನದಲ್ಲಿ ಎಂದಿಗೂ ರಾಜಕೀಯ ಒತ್ತಡ ಎದುರಿಸಿಲ್ಲ: CJI ಚಂದ್ರಚೂಡ್

ಈ ಕುರಿತು ಪಿಟಿಐ ಜೊತೆ ಮಾತನಾಡಿದ ನಿತೀಶ್ ಕುಮಾರ್, ಚಂದ್ರಚೂಡ್ ಅವರು ಸುಮಾರು ಎರಡೂವರೆ ಗಂಟೆಗಳ ಕಾಲ ಅಯೋಧ್ಯೆಯಲ್ಲಿದ್ದರು. ಅವರು ಸಂಜೆ 5:30 ಕ್ಕೆ ರಾಮಕಥಾ ಪಾರ್ಕ್ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ಲಖನೌಗೆ ತೆರಳಿದರು ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com