ಪೂರ್ವ ಲಡಾಖ್‌ನ ಎಲ್‌ಎಸಿಯಲ್ಲಿ ಕರ್ತವ್ಯ ನಿರತ ಯೋಧ ಹುತಾತ್ಮ

ಇಂದು ನಡೆದ ಅಪಘಾತದಲ್ಲಿ ಯೋಧ ಶಂಕರ ರಾವ್ ಗೊತ್ತಾಪು ಅವರಿಗೆ ಮಾರಣಾಂತಿಕ ಗಾಯಗಳಾಗಿತ್ತು ಎಂದು ಅವರು ಹೇಳಿದ್ದಾರೆ. ಆದರೆ, ಅಪಘಾತದ ಸ್ವರೂಪವನ್ನು ವಿವರಿಸಿಲ್ಲ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಲಡಾಖ್: ಪೂರ್ವ ಲಡಾಖ್‌ನ ಗಡಿ ನಿಯಂತ್ರಣ ರೇಖೆಯಲ್ಲಿ ಕರ್ತವ್ಯ ನಿರತ ಯೋಧರೊಬ್ಬರು ಅಪಘಾತವೊಂದರಲ್ಲಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂದು ನಡೆದ ಅಪಘಾತದಲ್ಲಿ ಯೋಧ ಶಂಕರ ರಾವ್ ಗೊತ್ತಾಪು ಅವರಿಗೆ ಮಾರಣಾಂತಿಕ ಗಾಯಗಳಾಗಿತ್ತು ಎಂದು ಅವರು ಹೇಳಿದ್ದಾರೆ. ಆದರೆ, ಅಪಘಾತದ ಸ್ವರೂಪವನ್ನು ವಿವರಿಸಿಲ್ಲ. ಪೂರ್ವ ಲಡಾಖ್‌ನಲ್ಲಿ ನಿಯೋಜಿಸಲಾದ ವೀರ ಸೈನಿಕನನ್ನು ಕಳೆದುಕೊಂಡಿದ್ದಕ್ಕೆ ಭಾರತೀಯ ಸೇನೆಯು ವಿಷಾದಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಸ್ಫೋಟ, ಶೋಧ ಕಾರ್ಯಾಚರಣೆ!

ಲಡಾಖ್‌ನ ದೌಲತ್ ಬೇಗ್ ಓಲ್ಡಿ ಪ್ರದೇಶದ ಮಂದಿರ ಮೋರ್ಹ್‌ನಲ್ಲಿ T-72 ಟ್ಯಾಂಕ್‌ನ ಹಠಾತ್ ಪ್ರವಾಹದಿಂದ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿದಂತೆ ಐವರು ಸೈನಿಕರು ಹುತಾತ್ಮರಾದ ಕೆಲ ದಿನಗಳ ಬಳಿಕ ಈ ಬೆಳವಣಿಗೆಯಾಗಿದೆ. .

ಸೇನೆಯ ಅಧಿಕಾರಿಗಳ ಪ್ರಕಾರ, ಟ್ಯಾಂಕರ್ ನದಿ ದಾಟುವ ಅಭ್ಯಾಸದ ಸಮಯದಲ್ಲಿ ನೀರಿನ ಮಟ್ಟದಲ್ಲಿ ಹಠಾತ್ ಏರಿಕೆಯಿಂದ ಅವಘಡ ಸಂಭವಿಸಿತ್ತು ಎಂದು ಸೇನೆ ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com