ಲೋಕಸಭೆಯಲ್ಲಿ ಕಾಂಗ್ರೆಸ್ ಉಪ ನಾಯಕರಾಗಿ ಗೌರವ್ ಗೊಗೊಯ್ ನೇಮಕ

ಈ ಸಂಬಂಧ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಪ ನಾಯಕ, ಮುಖ್ಯ ಸಚೇತಕ ಮತ್ತು ಇಬ್ಬರು ವಿಪ್‌ಗಳನ್ನು ನೇಮಿಸುವ ಕುರಿತು ಮಾಹಿತಿ ನೀಡಿದ್ದಾರೆ
ಗೌರವ್ ಗೊಗೊಯ್
ಗೌರವ್ ಗೊಗೊಯ್
Updated on

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ ಉಪ ನಾಯಕರಾಗಿ ಗೌರವ್ ಗೊಗೊಯ್ ಅವರನ್ನು ನೇಮಿಸಲಾಗಿದೆ.

ಈ ಸಂಬಂಧ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಪ ನಾಯಕ, ಮುಖ್ಯ ಸಚೇತಕ ಮತ್ತು ಇಬ್ಬರು ವಿಪ್‌ಗಳನ್ನು ನೇಮಿಸುವ ಕುರಿತು ಮಾಹಿತಿ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಗೊಗೊಯ್ ಲೋಕಸಭೆಯಲ್ಲಿ ಪಕ್ಷದ ಉಪ ನಾಯಕರಾಗಿದ್ದರೆ, ಕೇರಳದಿಂದ ಎಂಟು ಬಾರಿ ಸಂಸದರಾಗಿರುವ ಕೋಡಿಕುನ್ನಿಲ್ ಸುರೇಶ್ ಪಕ್ಷದ ಮುಖ್ಯ ಸಚೇತಕರಾಗಿರುತ್ತಾರೆ. ವಿರುದುನಗರ ಸಂಸದ ಮಾಣಿಕ್ಕಂ ಟ್ಯಾಗೋರ್ ಮತ್ತು ಕಿಶನ್‌ಗಂಜ್ ಸಂಸದ ಮೊಹಮ್ಮದ್ ಜಾವೇದ್ ಲೋಕಸಭೆಯಲ್ಲಿ ಪಕ್ಷದ ವಿಪ್ ಆಗಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಪಕ್ಷವು ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕ ಎಂದು ಹೆಸರಿಸಿದ ನಂತರ ಅವರನ್ನು ಆ ಸ್ಥಾನಕ್ಕೆ ನೇಮಿಸಲಾಯಿತು. ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಮತ್ತು India ಮೈತ್ರಿಕೂಟ ಪಕ್ಷಗಳು ಲೋಕಸಭೆಯಲ್ಲಿ ಜನರ ಸಮಸ್ಯೆಗಳಿಗೆ ಶಕ್ತಿಯುತವಾಗಿ ಹೋರಾಡುತ್ತವೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.

ಗೌರವ್ ಗೊಗೊಯ್
ವಿಧಾನಸಭೆ ಉಪ ಚುನಾವಣೆ: ಇಂಡಿಯಾ ಮೈತ್ರಿಕೂಟಕ್ಕೆ 1 ಸ್ಥಾನದಲ್ಲಿ ಗೆಲುವು, 10 ರಲ್ಲಿ ಮುನ್ನಡೆ; 2 ಕ್ಷೇತ್ರದಲ್ಲಿ ಎನ್‌ಡಿಎ ಮುನ್ನಡೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com