ಕಾವೇರಿ ನೀರು ಬಿಡುಗಡೆಗೆ ಕರ್ನಾಟಕ ನಕಾರ: ತಮಿಳುನಾಡು ಸಿಎಂ ಸ್ಟಾಲಿನ್ ಖಂಡನೆ, ನಾಳೆ ಸರ್ವ ಪಕ್ಷ ಸಭೆ

'ಜುಲೈ 15ರ ಪ್ರಕಾರ, ಕರ್ನಾಟಕದ ನಾಲ್ಕು ಪ್ರಮುಖ ಅಣೆಕಟ್ಟುಗಳಲ್ಲಿ ಒಟ್ಟು 75. 586 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದರೆ, ತಮಿಳುನಾಡಿನ ಮೆಟ್ಟೂರು ಜಲಾಶಯದಲ್ಲಿ ಕೇವಲ 13. 808 ಅಡಿ ನೀರಿದೆ' ಮುಖ್ಯಮಂತ್ರಿ ಎಂಕೆ ಸ್ಟಾಲಿನ್
ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್
ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್
Updated on

ಚೆನ್ನೈ: ತಮಿಳುನಾಡಿಗೆ ಕಾವೇರಿ ನೀರಿನ ಪ್ರಮಾಣ ಕಡಿಮೆ ಮಾಡಿರುವ ರ್ನಾಟಕ ಸರ್ಕಾರದ ನಿಲುವನ್ನು ತಮಿಳುನಾಡು ಸರ್ಕಾರ ಖಂಡಿಸಿದೆ. ಅಂತರ ರಾಜ್ಯ ನದಿ ವಿವಾದದಲ್ಲಿ ಮುಂದೆ ಯಾವ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ನಿರ್ಧರಿಸಲು ನಾಳೆ ಸರ್ವ ಪಕ್ಷ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ.

ಜುಲೈ 15ರ ಪ್ರಕಾರ, ಕರ್ನಾಟಕದ ನಾಲ್ಕು ಪ್ರಮುಖ ಅಣೆಕಟ್ಟುಗಳಲ್ಲಿ ಒಟ್ಟು 75. 586 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದರೆ, ತಮಿಳುನಾಡಿನ ಮೆಟ್ಟೂರು ಜಲಾಶಯದಲ್ಲಿ ಕೇವಲ 13. 808 ಅಡಿ ನೀರಿದೆ ಎಂದು ಅವರು ಸೋಮವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್
ತಮಿಳುನಾಡಿಗೆ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಪ್ರಸ್ತುತದಲ್ಲಿನ ನೈರುತ್ಯ ಮುಂಗಾರು ಹಾಗೂ ಕರ್ನಾಟಕದ ಅಣೆಕಟ್ಟುಗಳಲ್ಲಿ ಒಳಹರಿವು ಹೆಚ್ಚಳ ಪರಿಗಣಿಸಿ ಈ ಮಾಸಾಂತ್ಯದವರೆಗೂ ಪ್ರತಿದಿನ ಒಂದು ಟಿಎಂಸಿ ಅಡಿ ಬಿಡುಗಡೆ ಮಾಡಲು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ನಿರ್ದೇಶನ ನೀಡಿದೆ. ಆದರೆ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಹೇಳಿರುವುದು ಆಘಾತಕಾರಿಯಾಗಿದೆ. ಈ ನಿರ್ದೇಶನವನ್ನು ಕೂಡಲೇ ಜಾರಿಗೊಳಿಸುವಂತೆ ಕೋರಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಪತ್ರ ಬರೆಯಲಾಗಿದೆ. ಸಮಿತಿ ಆದೇಶವನ್ನು ಕರ್ನಾಟಕ ಪಾಲಿಸದಿರುವುದು ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ.

ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್
ಕಾವೇರಿ ನೀರು ಬಿಡುಗಡೆಗೆ ನಕಾರ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ರೈತರ ಪ್ರತಿಭಟನೆ!

ಪ್ರಸ್ತುತದಲ್ಲಿನ ನೈರುತ್ಯ ಮುಂಗಾರು ಹಾಗೂ ಕರ್ನಾಟಕದ ಅಣೆಕಟ್ಟುಗಳಲ್ಲಿ ಒಳಹರಿವು ಹೆಚ್ಚಳ ಪರಿಗಣಿಸಿ ಈ ಮಾಸಾಂತ್ಯದವರೆಗೂ ಪ್ರತಿದಿನ ಒಂದು ಟಿಎಂಸಿ ಅಡಿ ಬಿಡುಗಡೆ ಮಾಡಲು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ನಿರ್ದೇಶನ ನೀಡಿದೆ. ಆದರೆ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಹೇಳಿರುವುದು ಆಘಾತಕಾರಿಯಾಗಿದೆ. ಈ ನಿರ್ದೇಶನವನ್ನು ಕೂಡಲೇ ಜಾರಿಗೊಳಿಸುವಂತೆ ಕೋರಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಪತ್ರ ಬರೆಯಲಾಗಿದೆ. ಸಮಿತಿ ಆದೇಶವನ್ನು ಕರ್ನಾಟಕ ಪಾಲಿಸದಿರುವುದು ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com