ಸಂಸತ್ತಿನ ಬಜೆಟ್ ಅಧಿವೇಶನ: ಜುಲೈ 21ಕ್ಕೆ ಸರ್ವ ಪಕ್ಷ ಸಭೆ, ಟಿಎಂಸಿ ಗೈರು

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 22 ರಂದು ಪ್ರಾರಂಭವಾಗಲಿದ್ದು, ಆಗಸ್ಟ್ 12 ರಂದು ಮುಕ್ತಾಯಗೊಳ್ಳಲಿದೆ. ಜುಲೈ 23 ರಂದು ಬಜೆಟ್ ಮಂಡಿಸಲಾಗುವುದು. ಹುತಾತ್ಮರ ದಿನವಾದ ಜುಲೈ 21 ರಂದು ಸರ್ವ ಪಕ್ಷ ಸಭೆಯಲ್ಲಿ ಪಕ್ಷದ ಯಾವುದೇ ಪ್ರತಿನಿಧಿಗಳು ಹಾಜರಾಗುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಮೂಲಗಳು ಹೇಳಿವೆ.
ಸಂಸತ್
ಸಂಸತ್
Updated on

ನವದೆಹಲಿ: ಮುಂದಿನ ಸೋಮವಾರದಿಂದ ಸಂಸತ್ತಿನ ಬಜೆಟ್ ಅಧಿವೇಶನ ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ ಜುಲೈ 21 ರಂದು ಕೇಂದ್ರ ಸರ್ಕಾರ ಸರ್ವ ಪಕ್ಷ ಸಭೆಯನ್ನು ಆಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಇದು ಮೊದಲ ಸಭೆಯಾಗಿದೆ. ಅವರು ಸಭೆಯಲ್ಲಿ ಭಾಗವಹಿಸಿದ್ದರೆ, ಇತರ ಪಕ್ಷಗಳ ಸದನದ ನಾಯಕರೊಂದಿಗೆ ಹಾಜರಾಗಲಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 22 ರಂದು ಪ್ರಾರಂಭವಾಗಲಿದ್ದು, ಆಗಸ್ಟ್ 12 ರಂದು ಮುಕ್ತಾಯಗೊಳ್ಳಲಿದೆ. ಜುಲೈ 23 ರಂದು ಬಜೆಟ್ ಮಂಡಿಸಲಾಗುವುದು. ಹುತಾತ್ಮರ ದಿನವಾದ ಜುಲೈ 21 ರಂದು ಸರ್ವ ಪಕ್ಷ ಸಭೆಯಲ್ಲಿ ಪಕ್ಷದ ಯಾವುದೇ ಪ್ರತಿನಿಧಿಗಳು ಹಾಜರಾಗುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಮೂಲಗಳು ಹೇಳಿವೆ.

ಸಂಸತ್
ಬಜೆಟ್ ಅಧಿವೇಶನ 2024: ಸಂಸತ್ ಭವನದ ಭದ್ರತೆಗಾಗಿ 140 ಸಿಐಎಸ್‌ಎಫ್ ಸಿಬ್ಬಂದಿ ನಿಯೋಜನೆ

1993 ರಲ್ಲಿ ಸಿಪಿಐ(ಎಂ) ನೇತೃತ್ವದ ಎಡರಂಗವು ಅಧಿಕಾರದಲ್ಲಿದ್ದಾಗ ರಾಜ್ಯ ಸಚಿವಾಲಯ ಮತ್ತು ಲೇಖಕರ ಭವನಗಳಿಗೆ ಮೆರವಣಿಗೆ ತೆರಳುತ್ತಿದ್ದ 13 ಕಾಂಗ್ರೆಸ್ ಬೆಂಬಲಿಗರು ಕೋಲ್ಕತ್ತಾ ಪೋಲೀಸರ ಗುಂಡಿಗೆ ಬಲಿಯಾದ ನೆನಪಿಗಾಗಿ ಜುಲೈ 21 ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. ಆ ಸಮಯದಲ್ಲಿ ಮಮತಾ ಬ್ಯಾನರ್ಜಿ ಅವರು ರಾಜ್ಯ ಯುವ ಕಾಂಗ್ರೆಸ್ ಮುಖ್ಯಸ್ಥರಾಗಿದ್ದರು ಮತ್ತು ಅವರು ಜನವರಿ 1, 1998 ರಂದು ತೃಣಮೂಲ ಕಾಂಗ್ರೆಸ್ ಸ್ಥಾಪಿಸಿದ ನಂತರವೂ ಪ್ರತಿ ವರ್ಷ ರ್‍ಯಾಲಿ ಆಯೋಜನೆ ಮೂಲಕ ಹುತಾತ್ಮರ ದಿನವನ್ನು ಆಚರಿಸುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com