ಬಾಂಗ್ಲಾದೇಶದಲ್ಲಿ ಹಿಂಸಾಚಾರ: ಸುಮಾರು 1,000 ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್

ಬಾಂಗ್ಲಾದೇಶದಲ್ಲಿ 8.500 ಭಾರತೀಯ ವಿದ್ಯಾರ್ಥಿಗಳು ಓದುತ್ತಿದ್ದಾರೆ, ಒಟ್ಟು 15,000 ಭಾರತೀಯರು ಅಲ್ಲಿ ವಾಸಿಸುತ್ತಿದ್ದಾರೆ. ಭಾರತೀಯ ಹೈಕಮಿಷನ್ ದೇಶಾದ್ಯಂತ ಕಲಿಯುತ್ತಿರುವ ಸುಮಾರು 4,000 ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದೆ.
ಶನಿವಾರ ಅಗರ್ತಲಾ ಇಂಟಿಗ್ರೇಟೆಡ್ ಚೆಕ್‌ಪೋಸ್ಟ್‌ನಲ್ಲಿ ದೇಶಾದ್ಯಂತ ಪ್ರತಿಭಟನೆಯ ನಡುವೆ ಭಾರತೀಯ ವಿದ್ಯಾರ್ಥಿಗಳು ವಲಸೆ ಕ್ಲಿಯರೆನ್ಸ್ ನಂತರ ಬಾಂಗ್ಲಾದೇಶದಿಂದ ಮರಳಿದರು.
ಶನಿವಾರ ಅಗರ್ತಲಾ ಇಂಟಿಗ್ರೇಟೆಡ್ ಚೆಕ್‌ಪೋಸ್ಟ್‌ನಲ್ಲಿ ದೇಶಾದ್ಯಂತ ಪ್ರತಿಭಟನೆಯ ನಡುವೆ ಭಾರತೀಯ ವಿದ್ಯಾರ್ಥಿಗಳು ವಲಸೆ ಕ್ಲಿಯರೆನ್ಸ್ ನಂತರ ಬಾಂಗ್ಲಾದೇಶದಿಂದ ಮರಳಿದರು.
Updated on

ನವದೆಹಲಿ: ಬಾಂಗ್ಲಾದೇಶದಲ್ಲಿ ತೀವ್ರ ಹಿಂಸಾಚಾರದ ಪರಿಸ್ಥಿತಿ ನಡುವೆ ಆತಂಕಗೊಂಡಿರುವ ಬಾಂಗ್ಲಾದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡುತ್ತಿರುವ ಸುಮಾರು ಸಾವಿರ ಭಾರತೀಯ ವಿದ್ಯಾರ್ಥಿಗಳು ವಾಯು ಮತ್ತು ಭೂ ಸಾರಿಗೆ ಮೂಲಕ ಸ್ವದೇಶಕ್ಕೆ ಬಂದಿಳಿದಿದ್ದಾರೆ.

ಬಾಂಗ್ಲಾದೇಶದಲ್ಲಿ 8.500 ಭಾರತೀಯ ವಿದ್ಯಾರ್ಥಿಗಳು ಓದುತ್ತಿದ್ದಾರೆ, ಒಟ್ಟು 15,000 ಭಾರತೀಯರು ಅಲ್ಲಿ ವಾಸಿಸುತ್ತಿದ್ದಾರೆ. ಭಾರತೀಯ ಹೈಕಮಿಷನ್ ದೇಶಾದ್ಯಂತ ಕಲಿಯುತ್ತಿರುವ ಸುಮಾರು 4,000 ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದೆ.

ಢಾಕಾದಲ್ಲಿನ ಭಾರತದ ಹೈಕಮಿಷನ್ ಮತ್ತು ಚಿತ್ತಗಾಂಗ್, ರಾಜ್‌ಶಾಹಿ, ಸಿಲ್ಹೆಟ್ ಮತ್ತು ಖುಲ್ನಾದಲ್ಲಿನ ಸಹಾಯಕ ಹೈಕಮಿಷನ್‌ಗಳು ಬಾಂಗ್ಲಾದೇಶದಲ್ಲಿನ ಇತ್ತೀಚಿನ ಬೆಳವಣಿಗೆಗಳ ನಂತರ ಭಾರತೀಯ ಪ್ರಜೆಗಳನ್ನು ವಾಪಸ್ ಕರೆಸಿಕೊಳ್ಳಲು ಸಹಾಯ ಮಾಡುತ್ತಿವೆ ಎಂದು MEA ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸ್ಥಳೀಯ ಅಧಿಕಾರಿಗಳ ಸಮನ್ವಯದಲ್ಲಿ, ಭಾರತ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಗಡಿ ದಾಟುವ ಸ್ಥಳಗಳಿಗೆ ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗುವಂತೆ ಹೈಕಮಿಷನ್ ಮತ್ತು ಸಹಾಯಕ ಹೈಕಮಿಷನ್‌ಗಳು ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ನಮ್ಮ ನಾಗರಿಕರಿಗೆ ಸುಗಮ ಮಾರ್ಗವನ್ನು ಒದಗಿಸಲು ನಾಗರಿಕ ವಿಮಾನಯಾನ, ವಲಸೆ, ಭೂ ಬಂದರುಗಳು ಮತ್ತು ಬಿಎಸ್ ಎಫ್ ಅಧಿಕಾರಿಗಳೊಂದಿಗೆ ಸಹ ಸಮನ್ವಯ ಸಾಧಿಸುತ್ತಿದೆ ಎಂದು ಹೇಳಿದೆ.

ಶನಿವಾರ ಅಗರ್ತಲಾ ಇಂಟಿಗ್ರೇಟೆಡ್ ಚೆಕ್‌ಪೋಸ್ಟ್‌ನಲ್ಲಿ ದೇಶಾದ್ಯಂತ ಪ್ರತಿಭಟನೆಯ ನಡುವೆ ಭಾರತೀಯ ವಿದ್ಯಾರ್ಥಿಗಳು ವಲಸೆ ಕ್ಲಿಯರೆನ್ಸ್ ನಂತರ ಬಾಂಗ್ಲಾದೇಶದಿಂದ ಮರಳಿದರು.
Bangladesh ಹಿಂಸಾಚಾರ: ಕನಿಷ್ಟ 105 ಮಂದಿ ಸಾವು, ಕರ್ಫ್ಯೂ ಜಾರಿ, 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್!

ಇಲ್ಲಿಯವರೆಗೆ 778 ಭಾರತೀಯ ವಿದ್ಯಾರ್ಥಿಗಳು ವಿವಿಧ ಭೂ ಬಂದರುಗಳ ಮೂಲಕ ಭಾರತಕ್ಕೆ ಮರಳಿದ್ದಾರೆ. ಇದಲ್ಲದೆ, ಸುಮಾರು 200 ವಿದ್ಯಾರ್ಥಿಗಳು ಢಾಕಾ ಮತ್ತು ಚಿತ್ತಗಾಂಗ್ ವಿಮಾನ ನಿಲ್ದಾಣಗಳ ಮೂಲಕ ಸಾಮಾನ್ಯ ವಿಮಾನ ಸೇವೆಗಳ ಮೂಲಕ ಮನೆಗೆ ಮರಳಿದ್ದಾರೆ. ನೇಪಾಳ ಮತ್ತು ಭೂತಾನ್‌ನ ವಿದ್ಯಾರ್ಥಿಗಳು ವಿನಂತಿಯ ಮೇರೆಗೆ ಭಾರತಕ್ಕೆ ದಾಟಲು ಸಹಾಯ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com