ಉತ್ತರ ಪ್ರದೇಶ: ಮನೆಯಲ್ಲಿ ಎಸ್‌ಪಿ ನಾಯಕನ ಹತ್ಯೆ, ಬಿಜೆಪಿ ಕೌನ್ಸಿಲರ್ ವಿರುದ್ಧ ಪ್ರಕರಣ ದಾಖಲು

ಉದಯಭಾನ್ ಮತ್ತು ಆತನ ಕುಟುಂಬದವರು ಈ ಹಿಂದೆ ಎರಡು ಬಾರಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನೀಲಂ ಸಿಂಗ್ ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ರಾಜಕೀಯ ಒತ್ತಡದಿಂದ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಅವರು ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಗೊಂಡಾ: ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಸಮಾಜವಾದಿ ಪಕ್ಷದ ಸ್ಥಳೀಯ ನಾಯಕನನ್ನು ಹತ್ಯೆ ಮಾಡಲಾಗಿದ್ದು, ಬಿಜೆಪಿ ಕೌನ್ಸಿಲರ್ ಮತ್ತು ಅವರ ಮೂವರು ಪುತ್ರರು ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಪರಸಾಪುರ ಪಟ್ಟಣದ ರಾಜಾ ತೋಲಾದಲ್ಲಿನ ಓಂ ಪ್ರಕಾಶ್ ಸಿಂಗ್ ಅವರ ಮನೆಗೆ ನುಗಿದ್ದ ಕೆಲವರು ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದರು.

ಮರಣೋತ್ತರ ಪರೀಕ್ಷೆ ನಡೆಸಿ, ಸಿಂಗ್ ಅವರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಶನಿವಾರ ಬೆಳಗ್ಗೆ ಪ್ರತಿಭಟನೆ ನಡೆಸಿದ ಅವರು, ಅಂತಿಮ ವಿಧಿವಿಧಾನಗಳನ್ನು ಮಾಡಲು ನಿರಾಕರಿಸಿದರು. ಸಿಂಗ್ ಅವರ ಮೃತದೇಹವನ್ನು ರಸ್ತೆ ಮೇಲಿಟ್ಟು ಆರೋಪಿಗಳ ನಂತರವೇ ಅಂತಿಮ ವಿಧಿವಿಧಾನಗಳನ್ನು ನಡೆಸಲಾಗುವುದು ಎಂದು ಪಟ್ಟು ಹಿಡಿದಿದ್ದರು ಎಂದು ಪೊಲೀಸರು ತಿಳಿಸಿದರು.

ಸಾಂದರ್ಭಿಕ ಚಿತ್ರ
ಉತ್ತರ ಪ್ರದೇಶ: ಚಂಡೀಗಢ– ದಿಬ್ರುಗಢ ಎಕ್ಸ್‌ಪ್ರೆಸ್‌ ರೈಲು ಹಳಿ ತಪ್ಪಿ ನಾಲ್ವರು ಸಾವು

ಪ್ರತಿಭಟನೆಯ ನಂತರ, ಹಿರಿಯ ಎಸ್‌ಪಿ ನಾಯಕ ಯೋಗೇಶ್ ಪ್ರತಾಪ್ ಸಿಂಗ್, ಮಾಜಿ ಶಾಸಕ ಬೈಜನಾಥ್ ದುಬೆ ಮತ್ತು ಪಕ್ಷದ ಇತರ ಮುಖಂಡರು ತಕ್ಷಣದ ಕ್ರಮಕ್ಕೆ ಒತ್ತಾಯಿಸಿದರು. ಈ ಮಧ್ಯೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಪಶ್ಚಿಮ) ರಾಧೇಶ್ಯಾಮ್ ರೈ ಮತ್ತು ಕರ್ನಲ್‌ಗಂಜ್ ಪೊಲೀಸ್ ಸರ್ಕಲ್ ಆಫೀಸರ್ ಚಂದ್ರಪಾಲ್ ಶರ್ಮಾ ಸ್ಥಳಕ್ಕಾಗಮಿಸಿ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಂಗ್ ಅವರ ಪತ್ನಿ ನೀಲಂ ನೀಡಿದ ದೂರಿನ ಆಧಾರದ ಮೇಲೆ, ಪರಸ್‌ಪುರ ನಗರ ಪಂಚಾಯತ್‌ನ ಬಿಜೆಪಿ ಕೌನ್ಸಿಲರ್ ಉದಯಭನ್ ಸಿಂಗ್ ಅಲಿಯಾಸ್ ಲಲ್ಲನ್ ಸಿಂಗ್ ಮತ್ತು ಅವರ ಮೂವರು ಪುತ್ರರು ಸೇರಿದಂತೆ ಐದು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪರಸ್‌ಪುರ ಪೊಲೀಸ್ ಠಾಣೆ ಪ್ರಭಾರಿ ದಿನೇಶ್ ಸಿಂಗ್ ಹೇಳಿದ್ದಾರೆ. ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ತಂಡವನ್ನು ರಚಿಸಲಾಗಿದೆ. ಓಂ ಪ್ರಕಾಶ್ ಸಿಂಗ್ ಎಸ್‌ಪಿ ಚಿಹ್ನೆಯಡಿ ನಗರ ಪಂಚಾಯತ್ ಚುನಾವಣೆಯಲ್ಲಿ ಕೌನ್ಸಿಲರ್ ಸ್ಥಾನಕ್ಕೆ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ಉದಯಭಾನ್ ಸಿಂಗ್ ವಿರುದ್ಧ ಸೋತಿದ್ದರು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

ಉದಯಭಾನ್ ಮತ್ತು ಆತನ ಕುಟುಂಬದವರು ಈ ಹಿಂದೆ ಎರಡು ಬಾರಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನೀಲಂ ಸಿಂಗ್ ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ರಾಜಕೀಯ ಒತ್ತಡದಿಂದ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದು ಆರೋಪಿಗಳಿಗೆ ಧೈರ್ಯ ತುಂಬಿ ಶುಕ್ರವಾರ ಅವರ ಮನೆಗೆ ನುಗ್ಗಿ ಪತಿಯನ್ನು ಕೊಂದು ಹಾಕಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದರೆ ಪತಿ ಪ್ರಾಣ ಕಳೆದುಕೊಳ್ಳುತ್ತಿರಲಿಲ್ಲ ಎಂದು ನೀಲಂ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com