ಕೇಂದ್ರ ಸರ್ವಪಕ್ಷ ಸಭೆ: ಬಿಹಾರಕ್ಕೆ JD(U), ಆಂಧ್ರ ಪ್ರದೇಶಕ್ಕೆ YSRCP ವಿಶೇಷ ಸ್ಥಾನಮಾನಕ್ಕೆ ಒತ್ತಾಯ

ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು NEET-UG ಪೇಪರ್ ಸೋರಿಕೆ, ಇಡಿ ಮತ್ತು ಸಿಬಿಐನಂತಹ ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ ಮತ್ತು ಉಪ ಸಭಾಪತಿ ಸ್ಥಾನಕ್ಕೆ ಸಂಬಂಧಿಸಿದ ವಿಷಯಗಳನ್ನು ಇಂದು ಪ್ರಸ್ತಾಪಿಸಿದರು.
ಕೇಂದ್ರ ಸರ್ವಪಕ್ಷ ಸಭೆ: ಬಿಹಾರಕ್ಕೆ JD(U), ಆಂಧ್ರ ಪ್ರದೇಶಕ್ಕೆ YSRCP ವಿಶೇಷ ಸ್ಥಾನಮಾನಕ್ಕೆ ಒತ್ತಾಯ
Updated on

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಕೇಂದ್ರ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆ ಇಂದು ಭಾನುವಾರ ನಡೆಯಿತು. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್, ಕೇಂದ್ರ ಸಚಿವ ಮತ್ತು ಎಲ್ ಜೆಪಿ ನಾಯಕ ರಾಮ್ ವಿಲಾಸ್ ಪಾಸ್ವಾನ್ ಪುತ್ರ ಚಿರಾಗ್ ಪಾಸ್ವಾನ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು NEET-UG ಪೇಪರ್ ಸೋರಿಕೆ, ಇಡಿ ಮತ್ತು ಸಿಬಿಐನಂತಹ ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ ಮತ್ತು ಉಪ ಸಭಾಪತಿ ಸ್ಥಾನಕ್ಕೆ ಸಂಬಂಧಿಸಿದ ವಿಷಯಗಳನ್ನು ಇಂದು ಪ್ರಸ್ತಾಪಿಸಿದರು.

ಕೇಂದ್ರ ಸರ್ವಪಕ್ಷ ಸಭೆ: ಬಿಹಾರಕ್ಕೆ JD(U), ಆಂಧ್ರ ಪ್ರದೇಶಕ್ಕೆ YSRCP ವಿಶೇಷ ಸ್ಥಾನಮಾನಕ್ಕೆ ಒತ್ತಾಯ
ಸಂಸತ್ತಿನ ಬಜೆಟ್ ಅಧಿವೇಶನ ನಾಳೆ ಆರಂಭ: ಇಂದು ದೆಹಲಿಯಲ್ಲಿ ಸರ್ವಪಕ್ಷ ಸಭೆ

ಉತ್ತರ ಪ್ರದೇಶದ ಕನ್ವರ್ ಮಾರ್ಗದ ಆಹಾರ ಅಂಗಡಿಗಳಲ್ಲಿ ನಾಮಫಲಕಗಳ ಸಮಸ್ಯೆಯನ್ನು ಸಭೆಯಲ್ಲಿ ಸಮಾಜವಾದಿ ಪಕ್ಷದ ಸಂಸದ ರಾಮ್ ಗೋಪಾಲ್ ಯಾದವ್ ಪ್ರಸ್ತಾಪಿಸಿದರು.

ವೈಎಸ್‌ಆರ್‌ಸಿಪಿ ನಾಯಕ ಆಂಧ್ರಪ್ರದೇಶಕ್ಕೆ ವಿಶೇಷ ವರ್ಗದ ಸ್ಥಾನಮಾನಕ್ಕೆ ಒತ್ತಾಯಿಸಿದರು, ಆದರೂ ಟಿಡಿಪಿ ನಾಯಕ ಈ ವಿಷಯದ ಬಗ್ಗೆ ಮೌನವಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ. ಅಂತೆಯೇ, ಜೆಡಿಯು ಕೂಡ ಸಭೆಯಲ್ಲಿ ಬಿಹಾರಕ್ಕೆ ವಿಶೇಷ ವರ್ಗದ ಸ್ಥಾನಮಾನವನ್ನು ಒತ್ತಾಯಿಸಿತು ಎಂದು ಜೈರಾಂ ರಮೇಶ್ ಹೇಳಿದರು.

ಲೋಕಸಭೆ ಉಪ ಸ್ಪೀಕರ್ ಹುದ್ದೆ: ಸಭೆಯಲ್ಲಿ ಪ್ರತಿಪಕ್ಷಗಳಿಗೆ ಲೋಕಸಭೆ ಉಪ ಸಭಾಧ್ಯಕ್ಷರ ಸ್ಥಾನವನ್ನು ಕಾಂಗ್ರೆಸ್ ಬೇಡಿಕೆಯಿಟ್ಟಿದೆ. ಪ್ರತಿಷ್ಠಿತ ನೀಟ್ ಸೇರಿದಂತೆ ಪೇಪರ್ ಸೋರಿಕೆ ವಿಷಯವನ್ನು ಪ್ರಸ್ತಾಪಿಸಿದೆ ಎಂದು ಮೂಲಗಳು ತಿಳಿಸಿವೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಉಭಯ ಸದನಗಳನ್ನು ಸುಗಮವಾಗಿ ನಡೆಸಲು ಪ್ರತಿ ಪಕ್ಷದಿಂದ ಸಹಕಾರ ಕೋರಿದ ನಂತರ ಸಂಸತ್ತಿನಲ್ಲಿ ಸಮಸ್ಯೆಗಳನ್ನು ಪ್ರಸ್ತಾಪಿಸಲು ಪ್ರತಿಪಕ್ಷಗಳಿಗೆ ಅವಕಾಶ ನೀಡಬೇಕು ಎಂದು ಪಕ್ಷದ ನಾಯಕ ಗೌರವ್ ಗೊಗೊಯ್ ಹೇಳಿದರು.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸರ್ಕಾರದ ದೃಷ್ಟಿಕೋನವನ್ನು ಪ್ರಸ್ತುತಪಡಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ ಮತ್ತು ಕೆ ಸುರೇಶ್, ಎಐಎಂಐಎಂನ ಅಸಾದುದ್ದೀನ್ ಓವೈಸಿ, ಆರ್‌ಜೆಡಿಯ ಅಭಯ್ ಕುಶ್ವಾಹ, ಜೆಡಿಯುನ ಸಂಜಯ್ ಝಾ, ಎಎಪಿಯ ಸಂಜಯ್ ಸಿಂಗ್, ಎಸ್‌ಪಿ ನಾಯಕ ರಾಮ್ ಗೋಪಾಲ್ ಯಾದವ್ ಮತ್ತು ಎನ್‌ಸಿಪಿಯ ಪ್ರಫುಲ್ ಪಟೇಲ್ ಅವರು ಸಂಸತ್ತಿನ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com