ಸಂಸತ್ ನಲ್ಲಿ ವಿಪಕ್ಷ ಸದಸ್ಯರಿಂದ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯ ಪ್ರಸ್ತಾಪ; ರಚನಾತ್ಮಕ ಚರ್ಚೆಗೆ ಸ್ಪೀಕರ್ ಕರೆ

ಪತ್ರಿಕೆ ಸೋರಿಕೆ ವಿಚಾರದಲ್ಲಿ ಪ್ರತಿಪಕ್ಷಗಳು ಸರ್ಕಾರವನ್ನು ಮೂಲೆಗುಂಪು ಮಾಡಲು ಪ್ರಯತ್ನಿಸುತ್ತಿದ್ದಂತೆ, ಸ್ಪೀಕರ್ ಓಂ ಬಿರ್ಲಾ, ಎಲ್ಲಾ ಪರೀಕ್ಷೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುವುದು ಸರಿಯಲ್ಲ ಮತ್ತು ಉತ್ತಮ ಪರೀಕ್ಷಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಸದಸ್ಯರು ಚರ್ಚಿಸಬೇಕು ಎಂದು ಹೇಳಿದರು.
rahul Gandhi
ರಾಹುಲ್ ಗಾಂಧಿ online desk
Updated on

ನವದೆಹಲಿ: ದೇಶದಲ್ಲಿನ ಪರೀಕ್ಷೆ ವ್ಯವಸ್ಥೆಯಲ್ಲಿ ಗಂಭೀರ ಸಮಸ್ಯೆಗಳಿವೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

7 ವರ್ಷಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಉದಾಹರಣೆಗಳು ಇಲ್ಲ ಎಂದು ಧರ್ಮೇಂದ್ರ ಪ್ರಧಾನ್ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಪತ್ರಿಕೆ ಸೋರಿಕೆ ವಿಚಾರದಲ್ಲಿ ಪ್ರತಿಪಕ್ಷಗಳು ಸರ್ಕಾರವನ್ನು ಮೂಲೆಗುಂಪು ಮಾಡಲು ಪ್ರಯತ್ನಿಸುತ್ತಿದ್ದಂತೆ, ಸ್ಪೀಕರ್ ಓಂ ಬಿರ್ಲಾ, ಎಲ್ಲಾ ಪರೀಕ್ಷೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುವುದು ಸರಿಯಲ್ಲ ಮತ್ತು ಉತ್ತಮ ಪರೀಕ್ಷಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಸದಸ್ಯರು ಚರ್ಚಿಸಬೇಕು ಎಂದು ಹೇಳಿದರು.

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ನಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಆರು ಎಫ್‌ಐಆರ್‌ಗಳನ್ನು ದಾಖಲಿಸಿದೆ.

ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ದಿನ, ಪ್ರತಿಪಕ್ಷ ಸದಸ್ಯರು ಪರೀಕ್ಷಾ ಪತ್ರಿಕೆ ಸೋರಿಕೆ ವಿಷಯವನ್ನು ಪ್ರಸ್ತಾಪಿಸಿದರು. NEET ಮಾತ್ರವಲ್ಲದೆ ಎಲ್ಲಾ ಪ್ರಮುಖ ಪರೀಕ್ಷೆಗಳಲ್ಲಿ ಪರೀಕ್ಷಾ ವ್ಯವಸ್ಥೆಯಲ್ಲಿ ಗಂಭೀರ ಸಮಸ್ಯೆ ಇದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಗಾಂಧಿ ಹೇಳಿದ್ದಾರೆ. ಲಕ್ಷಾಂತರ ವಿದ್ಯಾರ್ಥಿಗಳು ಕಳವಳಗೊಂಡಿರುವುದನ್ನು ಗಮನಿಸಿದ ಅವರು, "ನೀವು ಶ್ರೀಮಂತರಾಗಿದ್ದರೆ ಮತ್ತು ನಿಮ್ಮ ಬಳಿ ಹಣವಿದ್ದರೆ, ನೀವು ಭಾರತೀಯ ಪರೀಕ್ಷಾ ವ್ಯವಸ್ಥೆಯನ್ನು ಖರೀದಿಸಬಹುದು" ಎಂದು ಆರೋಪಿಸಿದರು.

"ಇದು ವ್ಯವಸ್ಥಿತ ಸಮಸ್ಯೆಯಾಗಿದೆ, ಇದನ್ನು ವ್ಯವಸ್ಥಿತ ಮಟ್ಟದಲ್ಲಿ ಸರಿಪಡಿಸಲು ನೀವು ನಿಖರವಾಗಿ ಏನು ಮಾಡುತ್ತಿದ್ದೀರಿ?" ಎಂದು ಪ್ರಶ್ನೋತ್ತರ ವೇಳೆಯಲ್ಲಿ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುತ್ತಿದ್ದ ಪ್ರಧಾನ್ ಅವರನ್ನು ರಾಹುಲ್ ಗಾಂಧಿ ಕೇಳಿದರು.

rahul Gandhi
ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ NEET-UG ಪರೀಕ್ಷೆ ಫಲಿತಾಂಶ ಪ್ರಕಟಿಸಿದ ಎನ್ ಟಿಎ

ಪರೀಕ್ಷಾ ವ್ಯವಸ್ಥೆಯನ್ನು ಸದಸ್ಯರು ಕಸದ ಬುಟ್ಟಿ ಎಂದು ಬಣ್ಣಿಸಿರುವುದು ದುರದೃಷ್ಟಕರ ಎಂದು ಪ್ರಧಾನ್ ಹೇಳಿದರು. ಈ ವಿಷಯದ ಬಗ್ಗೆ ರಚನಾತ್ಮಕ ಚರ್ಚೆಗಳು ನಡೆಯಬೇಕು ಎಂದು ಒತ್ತಿ ಹೇಳಿದ ಬಿರ್ಲಾ, ದೇಶದ ಎಲ್ಲಾ ಪರೀಕ್ಷೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದರೆ, ಅದು ಭಾರತೀಯ ಶಿಕ್ಷಣ ವ್ಯವಸ್ಥೆ ಮತ್ತು ಪ್ರಪಂಚದಾದ್ಯಂತದ ಗ್ರಹಿಕೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಸ್ಪೀಕರ್ ತಮ್ಮ ಹೇಳಿಕೆಗಳನ್ನು ಮುಗಿಸಿದ ನಂತರ, ಗಾಂಧಿ ಮಾತನಾಡಲು ಬಯಸಿದ್ದರು ಆದರೆ ಅನುಮತಿಸಲಿಲ್ಲ. ಇದನ್ನು ವಿರೋಧಿಸಿ ಗಾಂಧಿ ಮತ್ತು ಟಿಎಂಸಿ ಮತ್ತು ಡಿಎಂಕೆ ಸೇರಿದಂತೆ ಬಹುತೇಕ ಎಲ್ಲಾ ವಿರೋಧ ಪಕ್ಷದ ಸದಸ್ಯರು ಸದನದಿಂದ ಹೊರನಡೆದರು. ಸದನದಲ್ಲಿ ಕಾಂಗ್ರೆಸ್ ಉಪನಾಯಕ ಗೌರವ್ ಗೊಗೊಯ್ ಅವರು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com