ಕೇಂದ್ರ ಬಜೆಟ್ ನಲ್ಲಿ ತಮಿಳುನಾಡು ನಿರ್ಲಕ್ಷ್ಯ: ನೀತಿ ಆಯೋಗ ಸಭೆ ಬಹಿಷ್ಕರಿಸಿದ ಸ್ಟಾಲಿನ್

'ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ತಮಿಳುನಾಡನ್ನು ನಿರ್ಲಕ್ಷಿಸಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯನ್ನು ಬಹಿಷ್ಕರಿಸುತ್ತೇನೆ'
ಸಿಎಂ ಎಂಕೆ ಸ್ಟಾಲಿನ್
ಸಿಎಂ ಎಂಕೆ ಸ್ಟಾಲಿನ್
Updated on

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಜುಲೈ 27 ರಂದು ನಡೆಯಲಿರುವ ನೀತಿ ಆಯೋಗ ಸಭೆಯನ್ನು ಬಹಿಷ್ಕರಿಸುವ ನಿರ್ಧಾರವನ್ನು ಘೋಷಿಸಿದ್ದಾರೆ. 2024-25 ರ ಕೇಂದ್ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ತಮಿಳುನಾಡನ್ನು ನಿರ್ಲಕ್ಷಿಸಿದೆ ಎಂಬ ಕಾರಣದಿಂದ ಪ್ರತಿಕ್ರಿಯೆಯಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ತಮಿಳುನಾಡನ್ನು ಬಹಿಷ್ಕರಿಸಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯನ್ನು ಬಹಿಷ್ಕರಿಸುವುದಾಗಿ ಸ್ಟಾಲಿನ್ ಹೇಳಿದ್ದಾರೆ.

ಸಿಎಂ ಎಂಕೆ ಸ್ಟಾಲಿನ್
ಕೇಂದ್ರ ಬಜೆಟ್ 2024: ನಾಯ್ಡು-ನಿತೀಶ್‌ ರಾಜ್ಯಗಳಿಗೆ ಬಂಪರ್ ಕೊಡುಗೆ; ಬಿಹಾರ ರಸ್ತೆ ಯೋಜನೆಗಳಿಗೆ 26,000 ಕೋಟಿ ರೂ. ಘೋಷಣೆ

ಈ ನಿಲುವನ್ನು ಕಾಂಗ್ರೆಸ್-ಆಡಳಿತವಿರುವ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಬೆಂಬಲಿಸಿದ್ದಾರೆ, ಕೇಂದ್ರ ಬಜೆಟ್‌ನಲ್ಲಿ ತಮಿಳುನಾಡನ್ನು ನಿರ್ಲಕ್ಷಿಸಿರುವ ಬಗ್ಗೆ ವ್ಯಾಪಕವಾದ ಟೀಕೆಗಳು ಬರುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com