ಜಮ್ಮು-ಕಾಶ್ಮೀರ: ಕುಪ್ವಾರದಲ್ಲಿ ಎನ್ ಕೌಂಟರ್; ಓರ್ವ ಯೋಧ ಹುತಾತ್ಮ, ನಾಲ್ವರಿಗೆ ಗಾಯ

ಕಾರ್ಗಿಲ್ ವಿಜಯ್ ದಿವಸ್‌ವಾದ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ್ದರು. ಭಾರತೀಯ ಸೇನೆಯು ಪ್ರತಿ ಭಯೋತ್ಪಾದಕ ಸವಾಲನ್ನು ಸೋಲಿಸುತ್ತದೆ ಎಂದು ಹೇಳಿದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಇಂದು ನಸುಕಿನ ಜಾವ ಭಯೋತ್ಪಾದಕರು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ನಸುಕಿನ ಜಾವ 2.30ರ ಸುಮಾರಿಗೆ ಎಲ್‌ಒಸಿ ಬಳಿಯ ಕುಮ್ಕಾಡಿಯಲ್ಲಿ ಸೇನಾ ಪೋಸ್ಟ್ ಮೇಲೆ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಘಟನೆಯ ಬಗ್ಗೆ ಸೇನೆಯು ಯಾವುದೇ ಹೇಳಿಕೆ ನೀಡಿಲ್ಲ. ಫೆಬ್ರವರಿ 2021 ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮವನ್ನು ಕಡಿಮೆ ಮಾಡುವ ಮೊದಲು ಅನೇಕ ದಾಳಿಗಳಲ್ಲಿ ಭಾಗಿಯಾಗಿರುವ ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಮ್ (BAT) ಯಿಂದ ಇದು ದಾಳಿಯಾಗಿದೆ ಎಂದು ಮೂಲಗಳು ಹೇಳುತ್ತವೆ.

ಕಾರ್ಗಿಲ್ ವಿಜಯ್ ದಿವಸ್‌ವಾದ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ್ದರು. ಭಾರತೀಯ ಸೇನೆಯು ಪ್ರತಿ ಭಯೋತ್ಪಾದಕ ಸವಾಲನ್ನು ಸೋಲಿಸುತ್ತದೆ ಎಂದು ಹೇಳಿದರು.

ಸಾಂದರ್ಭಿಕ ಚಿತ್ರ
ಜಮ್ಮು-ಕಾಶ್ಮೀರ: ಉಗ್ರರ ಒಳನುಸುಳುವಿಕೆ ಯತ್ನ ವಿಫಲ, ಓರ್ವ ಸೈನಿಕ ಹುತಾತ್ಮ

ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಈ ವಾರದ ಆರಂಭದಲ್ಲಿ ಅದೇ ಪ್ರದೇಶದ ಎಲ್ಒಸಿಗೆ ಭೇಟಿ ನೀಡಿದರು. ಒಳನುಸುಳುವಿಕೆ ಮತ್ತು ಭಯೋತ್ಪಾದಕ ದಾಳಿಗಳನ್ನು ಎದುರಿಸಲು ಪಡೆಗಳ ಸನ್ನದ್ಧತೆಯನ್ನು ಪರಿಶೀಲಿಸಿದರು.

ಹೆಚ್ಚುತ್ತಿರುವ ಭಯೋತ್ಪಾದಕ ಘಟನೆಗಳ ಮಧ್ಯೆ, ಜಮ್ಮು ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿಯನ್ನು ನಿರ್ಣಯಿಸಲು ಪ್ರಧಾನಿ ಮೋದಿ ಕಳೆದ ತಿಂಗಳು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಮಾತನಾಡಿದ್ದಾರೆ. ಕೇಂದ್ರಾಡಳಿತ ಪ್ರದೇಶದ ಭದ್ರತಾ ಸಂಬಂಧಿತ ಪರಿಸ್ಥಿತಿ ಮತ್ತು ಸಶಸ್ತ್ರ ಪಡೆಗಳು ಕೈಗೊಳ್ಳುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ಸಂಪೂರ್ಣ ಅವಲೋಕನವನ್ನು ನೀಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com