ಶ್ರೀನಗರ: ಅಮರನಾಥ ಯಾತ್ರೆಗೆ ತೆರಳಿದ ಮತ್ತೊಂದು ಗುಂಪು

ಈ ವರ್ಷ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳ ಸಂಖ್ಯೆಯಲ್ಲಿ ಗಮನಾರ್ಹ ಹೆಚ್ಚಳದ ನಡುವೆ ಅಮರನಾಥ ಯಾತ್ರೆ ನಡೆಯುತ್ತಿದೆ. ಅಮರನಾಥ ಪುಣ್ಯಕ್ಷೇತ್ರ ಮಂಡಳಿಯು ಅಮರನಾಥ ಯಾತ್ರೆಯನ್ನು ಆಯೋಜಿಸುತ್ತದೆ.
ಅಮರನಾಥ ಯಾತ್ರೆ
ಅಮರನಾಥ ಯಾತ್ರೆ
Updated on

ಶ್ರೀನಗರ: ಬಿಗಿ ಭದ್ರತೆಯ ನಡುವೆ ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ ಅಮರನಾಥ ಗುಹಾ ದೇಗುಲಕ್ಕೆ ಭಾನುವಾರ ಇಲ್ಲಿನ ಪಂಥಾಚೌಕ್‌ನಿಂದ ಮತ್ತೊಂದು ಭಕ್ತರ ತಂಡ ತೆರಳಿತು. ಯಾತ್ರಾರ್ಥಿಗಳು ಬಾಲ್ಟಾಲ್ ಮತ್ತು ಪಹಲ್ಗಾಮ್‌ನ ಮೂಲ ಶಿಬಿರಗಳ ಕಡೆಗೆ ಪ್ರಯಾಣಿಸಿದ್ದಾರೆ. ಅಲ್ಲಿಂದ ಅವರು ಹಿಮಲಿಂಗದ ದರ್ಶನ ಪಡೆಯಲು ಗುಹಾ ದೇವಾಲಯಕ್ಕೆ ತೆರಳುತ್ತಾರೆ.

ಅಮರನಾಥ ಯಾತ್ರೆ
ಅಮರನಾಥ ಯಾತ್ರೆ: ಸುಮಾರು 2.66 ಲಕ್ಷ ಯಾತ್ರಾರ್ಥಿಗಳಿಂದ ಹಿಮಲಿಂಗ ದರ್ಶನ

ಯಾತ್ರೆಗಾಗಿ ಉತ್ತಮ ರೀತಿಯ ವ್ಯವಸ್ಥೆ ಮಾಡಲಾಗಿದೆ. ನಾನು ಪ್ರತಿಯೊಬ್ಬರ ಸುರಕ್ಷತೆ ಮತ್ತು ದೇಶದ ಪ್ರಗತಿಗಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಉತ್ತರ ಪ್ರದೇಶದ ಯಾತ್ರಾರ್ಥಿ ಬಿನಯ್ ಕುಮಾರ್ಸಿ ಹೇಳಿದರು. ಭದ್ರತಾ ವ್ಯವಸ್ಥೆಗಳು ಸಹ ಚೆನ್ನಾಗಿವೆ. ಇಲ್ಲಿಗೆ ಬಂದಿರುವುದು ನನಗೆ ತುಂಬಾ ಸಂತೋಷವಾಗಿದೆ. ಎಲ್ಲರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ" ಎಂದು ಛತ್ತೀಸ್‌ಗಢದ ನಿವಾಸಿ ಕಮಲ್ ನಿರ್ಮಾಲ್ಕರ್ ಹೇಳಿದರು.

ಈ ವರ್ಷ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳ ಸಂಖ್ಯೆಯಲ್ಲಿ ಗಮನಾರ್ಹ ಹೆಚ್ಚಳದ ನಡುವೆ ಅಮರನಾಥ ಯಾತ್ರೆ ನಡೆಯುತ್ತಿದೆ. ಅಮರನಾಥ ಪುಣ್ಯಕ್ಷೇತ್ರ ಮಂಡಳಿಯು ಅಮರನಾಥ ಯಾತ್ರೆಯನ್ನು ಆಯೋಜಿಸುತ್ತದೆ. ಕಾಶ್ಮೀರದ ಬಾಲ್ಟಾಲ್ ಮತ್ತು ಪಹಲ್ಗಾಮ್ ಮೂಲ ಶಿಬಿರಗಳಿಂದ ಜೂನ್ 29 ರಂದು ಔಪಚಾರಿಕವಾಗಿ ಪ್ರಾರಂಭವಾದ 52 ದಿನಗಳ ಯಾತ್ರೆಯು ಆಗಸ್ಟ್ 19 ರಂದು ಮುಕ್ತಾಯಗೊಳ್ಳಲಿದೆ. ಶಿವನ ಭಕ್ತರು ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ ಪವಿತ್ರ ಗುಹೆಗೆ ವಾರ್ಷಿಕ ತೀರ್ಥಯಾತ್ರೆಯನ್ನು ಕೈಗೊಳ್ಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com