ನವದೆಹಲಿ: ನೆಲಮಾಳಿಗೆಗೆ ನೀರು ನುಗ್ಗಿ ಮೂವರು UPSC ಆಕಾಂಕ್ಷಿಗಳು ಸಾವು; 13 'ಅಕ್ರಮ' ಕೋಚಿಂಗ್ ಸೆಂಟರ್‌ಗಳಿಗೆ ಬೀಗ

ಭಾನುವಾರ ತಡರಾತ್ರಿಯವರೆಗೆ ನಡೆದ ಕಾರ್ಯಾಚರಣೆಯಲ್ಲಿ ಸುಮಾರು 13 ಕೋಚಿಂಗ್ ಸೆಂಟರ್‌ಗಳನ್ನು ಸ್ಥಗಿತಗೊಳಿಸಲಾಗಿದೆ.
ನೆಲಮಾಳಿಗೆಗೆ ನೀರು ನುಗ್ಗಿದ ಪಿಜಿ ಸೆಂಟರ್
ನೆಲಮಾಳಿಗೆಗೆ ನೀರು ನುಗ್ಗಿದ ಪಿಜಿ ಸೆಂಟರ್
Updated on

ನವದೆಹಲಿ: ರಾಷ್ಟ್ರ ರಾಜಧಾನಿಯ ಕೋಚಿಂಗ್ ಸೆಂಟರ್ ವೊಂದರ ನೆಲಮಾಳಿಗೆಗೆ ನೀರು ನುಗ್ಗಿ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಸಾವಿಗೀಡಾದ ನಂತರ ಎಚ್ಚೆತ್ತುಕೊಂಡಿರುವ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಅಕ್ರಮ ಕೋಚಿಂಗ್ ಸೆಂಟರ್‌ಗಳ ವಿರುದ್ಧ ಕ್ರಮವನ್ನು ಪ್ರಾರಂಭಿಸಿದೆ. ಅಲ್ಲದೇ ಘಟನೆ ಕುರಿತು ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ನೆಲಮಾಳಿಗೆಗೆ ನೀರು ನುಗ್ಗಿದ ಪಿಜಿ ಸೆಂಟರ್
Delhi flood: ಐಎಎಸ್ ಕೋಚಿಂಗ್ ಸೆಂಟರ್ ನ ಮಾಲೀಕ, ಸಂಯೋಜಕ ಬಂಧನ, ವಿದ್ಯಾರ್ಥಿಗಳಿಂದ ಪ್ರತಿಭಟನೆ

ಭಾನುವಾರ ತಡರಾತ್ರಿಯವರೆಗೆ ನಡೆದ ಕಾರ್ಯಾಚರಣೆಯಲ್ಲಿ ಸುಮಾರು 13 ಕೋಚಿಂಗ್ ಸೆಂಟರ್‌ಗಳನ್ನು ಸ್ಥಗಿತಗೊಳಿಸಲಾಗಿದೆ. ಇವುಗಳಲ್ಲಿ ಐಎಎಸ್ ಗುರುಕುಲ, ಚಾಹಲ್ ಅಕಾಡೆಮಿ, ಪ್ಲುಟಸ್ ಅಕಾಡೆಮಿ, ಸಾಯಿ ಟ್ರೇಡಿಂಗ್, ಐಎಎಸ್ ಸೇತು, ಟಾಪರ್ಸ್ ಅಕಾಡೆಮಿ, ದೈನಿಕ್ ಸಂವಾದ್, ಸಿವಿಲ್ಸ್ ಡೈಲಿ ಐಎಎಸ್, ಕೆರಿಯರ್ ಪವರ್, 99 ಟಿಪ್ಪಣಿಗಳು, ವಿದ್ಯಾ ಗುರು, ಗೈಡೆನ್ಸ್ ಐಐಎಸ್ ಮತ್ತು ಈಜಿ ಫರ್ ಐಎಎಸ್ ಕೋಚಿಂಗ್ ಸೆಂಟರ್ ಗಳು ಸೇರಿವೆ.

ನೆಲಮಾಳಿಗೆಗೆ ನೀರು ನುಗ್ಗಿದ ಪಿಜಿ ಸೆಂಟರ್
ಅಸುರಕ್ಷಿತ ನಿರ್ಮಾಣಕ್ಕೆ ಜನರು ಬೆಲೆ ತೆರುತ್ತಿದ್ದಾರೆ: ಕೋಚಿಂಗ್ ಸೆಂಟರ್ ಘಟನೆ ಕುರಿತು ರಾಹುಲ್!

"ಈ ಕೋಚಿಂಗ್ ಸೆಂಟರ್‌ಗಳು ನೆಲಮಾಳಿಗೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ ಮತ್ತು ಅವುಗಳನ್ನು ಸ್ಥಳದಲ್ಲೇ ಸೀಲ್ ಮಾಡಲಾಗಿದ್ದು, ನೋಟಿಸ್ ಅಂಟಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಶನಿವಾರ ಘಟನೆ ನಡೆದ ರಾವ್ಸ್ ಐಎಎಸ್ ಸ್ಟಡಿ ಸರ್ಕಲ್ ಕೇಂದ್ರವನ್ನು ಕೂಡಾ ಪೊಲೀಸರು ಸೀಲ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com