ಅಬಕಾರಿ ನೀತಿ ಪ್ರಕರಣ: BRS ನಾಯಕಿ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯವು ಜುಲೈ 3 ರವರೆಗೆ ಸೋಮವಾರ ವಿಸ್ತರಿಸಿದೆ.
ಕೆ ಕವಿತಾ
ಕೆ ಕವಿತಾ
Updated on

ನವದೆಹಲಿ: ಆಪಾದಿತ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯವು ಜುಲೈ 3 ರವರೆಗೆ ಸೋಮವಾರ ವಿಸ್ತರಿಸಿದೆ.

ಕವಿತಾ ಅವರ ವಿರುದ್ಧ ಪ್ರೊಡಕ್ಷನ್ ವಾರಂಟ್ ಹೊರಡಿಸಿದ ಹಿಂದಿನ ಆದೇಶದ ಅನ್ವಯ ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ನ್ಯಾಯಾಂಗ ಬಂಧನ ಅವರಧಿಯನ್ನು ವಿಸ್ತರಿಸಿದರು.

ದೆಹಲಿ ಅಪಕಾರಿ ಹಗರಣದಲ್ಲಿ ಇಡಿ ಮತ್ತು ಸಿಬಿಐ ದಾಖಲಿಸಿರುವ ಎರಡು ಪ್ರಕರಣಗಳಲ್ಲಿ ಕವಿತಾ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಕೆ ಕವಿತಾ
ದೆಹಲಿ ಅಬಕಾರಿ ನೀತಿ ಹಗರಣ: ಬಿಆರ್‌ಎಸ್ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ನ್ಯಾಯಾಲಯವು ಇದೇ ಪ್ರಕರಣದಲ್ಲಿ ಮೂವರು ಸಹ ಆರೋಪಿಗಳಾದ ಪ್ರಿನ್ಸ್, ದಾಮೋದರ್ ಮತ್ತು ಅರವಿಂದ್ ಸಿಂಗ್ ಅವರಿಗೆ ಜಾಮೀನು ನೀಡಿದೆ.

ಸದ್ಯ ರದ್ದಾಗಿರುವ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ 46 ವರ್ಷದ ಬಿಆರ್‌ಎಸ್ ನಾಯಕಿ ಕವಿತಾ ಅವರನ್ನು ಮಾರ್ಚ್ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಿಂದ ಇ.ಡಿ ಅಧಿಕಾರಿಗಳು ಬಂಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com