ತೆಲಂಗಾಣ: ಕಾಂಗ್ರೆಸ್ ಗೆ ಜನಾದೇಶ, ಮತ್ತಷ್ಟು ಪರಿಣಾಮಕಾರಿ ಆಡಳಿತ ನೀಡಲು ಉತ್ತೇಜನ- ಸಿಎಂ ರೇವಂತ್ ರೆಡ್ಡಿ

ಲೋಕಸಭೆ ಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ, ಜನಾದೇಶ ಕಾಂಗ್ರೆಸ್‌ಗೆ ಇದೆ ಎಂಬುದನ್ನು ಚುನಾವಣೆ ತಿಳಿಸಿದೆ. ಈ ಫಲಿತಾಂಶ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆತ್ಮವಿಶ್ವಾಸವನ್ನು ಹೆಚ್ಚಿಸಿದ್ದು, ಮತ್ತಷ್ಟು ಪರಿಣಾಮಕಾರಿ ಆಡಳಿತ ನೀಡಲು ಉತ್ತೇಜನ ನೀಡಿದೆ ಎಂದು ಹೇಳಿದರು.
ತೆಲಂಗಾಣ ಸಿಎಂ ರೇವಂತ್ ರೆಡ್ಡಿ
ತೆಲಂಗಾಣ ಸಿಎಂ ರೇವಂತ್ ರೆಡ್ಡಿ
Updated on

ಹೈದರಾಬಾದ್: ಲೋಕಸಭೆ ಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ, ಜನಾದೇಶ ಕಾಂಗ್ರೆಸ್‌ಗೆ ಇದೆ ಎಂಬುದನ್ನು ಚುನಾವಣೆ ತಿಳಿಸಿದೆ. ಈ ಫಲಿತಾಂಶ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆತ್ಮವಿಶ್ವಾಸವನ್ನು ಹೆಚ್ಚಿಸಿದ್ದು, ಮತ್ತಷ್ಟು ಪರಿಣಾಮಕಾರಿ ಆಡಳಿತ ನೀಡಲು ಉತ್ತೇಜನ ನೀಡಿದೆ ಎಂದು ಹೇಳಿದರು.

ತೆಲಂಗಾಣದ ಜನರು ಕಾಂಗ್ರೆಸ್ ಸರ್ಕಾರದ 100 ದಿನಗಳ ಆಡಳಿತವನ್ನು ಒಪ್ಪಿಕೊಂಡಿದ್ದು, ಎಂಟು ಲೋಕಸಭಾ ಸ್ಥಾನಗಳನ್ನು ನೀಡಿದ್ದಾರೆ ಎಂದು ಹೇಳಿದ ಮುಖ್ಯಮಂತ್ರಿ ಸಿಕಂದರಾಬಾದ್ ಕಂಟೋನ್ಮೆಂಟ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ ಮಾಡಿದ ಜನತೆಗೆ ಧನ್ಯವಾದ ಅರ್ಪಿಸಿದರು. ವಿಜೇತ ಕಾಂಗ್ರೆಸ್ ಅಭ್ಯರ್ಥಿ ಶ್ರೀಗಣೇಶ್ ಅವರನ್ನು ಸನ್ಮಾನಿಸಿದರು.

ತೆಲಂಗಾಣ ಸಿಎಂ ರೇವಂತ್ ರೆಡ್ಡಿ
ದೆಹಲಿಗೆ ಹೊರಟ ಎನ್.ಚಂದ್ರಬಾಬು ನಾಯ್ಡು: ನಾವು NDA ಭಾಗವಾಗಿದ್ದೇವೆ ಎಂದ 'ಕಿಂಗ್ ಮೇಕರ್'

ಪಕ್ಷದ ಬೆಂಬಲಿಗರು, ಕಾರ್ಯಕರ್ತರು ಮತ್ತು ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದ ರೇವಂತ್ ರೆಡ್ಡಿ, ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಉಪಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿರುವುದು ಪಕ್ಷದ ಕಾರ್ಯಕರ್ತರ ಗೆಲುವಾಗಿದೆ. ಕಾರ್ಯಕರ್ತರ ಶ್ರಮವನ್ನು ಪಕ್ಷ ಗುರುತಿಸುತ್ತದೆ ಎಂದರು. ಬುಧವಾರ ಮಾದರಿ ನೀತಿ ಸಂಹಿತೆ (ಎಂಸಿಸಿ) ಹಿಂಪಡೆಯಲಾಗುವುದು, ಜನಪರ ಆಡಳಿತ ಮತ್ತೆ ಆರಂಭವಾಗಲಿದೆ. ಮುಂದಿನ ದಿನಗಳಲ್ಲಿ ನನ್ನ ಆಡಳಿತ ಶಾಶ್ವತವಾಗಿ ಜನರ ಹೃದಯದಲ್ಲಿ ನೆಲೆಸಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com