ದೆಹಲಿ ನೀರಿನ ಬಿಕ್ಕಟ್ಟು: ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಹಿಮಾಚಲ ಪ್ರದೇಶಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

ನೀರಿನ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದೆಹಲಿಗೆ 137 ಕ್ಯೂಸೆಕ್ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಹಿಮಾಚಲ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on

ನವದೆಹಲಿ: ನೀರಿನ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದೆಹಲಿಗೆ 137 ಕ್ಯೂಸೆಕ್ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಹಿಮಾಚಲ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.

ಈ ವಿಚಾರದಲ್ಲಿ ತಮಗೆ ಯಾವುದೇ ಅಭ್ಯಂತರವಿಲ್ಲ ಮತ್ತು ಅದರೊಂದಿಗೆ ಲಭ್ಯವಿರುವ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ ಎಂದು ನ್ಯಾಯಮೂರ್ತಿಗಳಾದ ಪಿಕೆ ಮಿಶ್ರಾ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ರಜಾಕಾಲದ ಪೀಠಕ್ಕೆ ಹಿಮಾಚಲ ಪ್ರದೇಶ ತಿಳಿಸಿದೆ.

ಹಿಮಾಚಲ ಪ್ರದೇಶದಿಂದ ಬಿಡುಗಡೆಯಾದ ಹೆಚ್ಚುವರಿ ನೀರನ್ನು ರಾಷ್ಟ್ರ ರಾಜಧಾನಿಗೆ ತಲುಪುವಂತೆ ನೋಡಿಕೊಳ್ಳುವಂತೆ ಪೀಠವು ಹರಿಯಾಣ ಸರ್ಕಾರಕ್ಕೆ ನಿರ್ದೇಶಿಸಿದೆ. ಅಲ್ಲದೆ, ದೆಹಲಿ ಸರ್ಕಾರವು ನೀರನ್ನು ವ್ಯರ್ಥ ಮಾಡಬಾರದು ಎಂದು ಸೂಚಿಸಿದೆ.

137 ಕ್ಯೂಸೆಕ್ ಹೆಚ್ಚುವರಿ ನೀರನ್ನು ಹಿಮಾಚಲ ಪ್ರದೇಶವು ಜೂನ್ 7 ರಂದು ಹರಿಯಾಣಕ್ಕೆ ಪೂರ್ವ ಸೂಚನೆಯೊಂದಿಗೆ ಬಿಡುಗಡೆ ಮಾಡಲಿದೆ ಎಂದು ಅದು ಹೇಳಿದೆ.

ಸುಪ್ರೀಂ ಕೋರ್ಟ್
ದೆಹಲಿಯಲ್ಲಿ ನೀರಿನ ಬಿಕ್ಕಟ್ಟು ಸೃಷ್ಟಿಸಲು ಬಿಜೆಪಿ ಮುಂದು; ಯಮುನಾದಿಂದ ಸರಬರಾಜು ಸ್ಥಗಿತ: ಅತಿಶಿ

ವಿಚಾರಣೆ ವೇಳೆ ನೀರಿನ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಅಭಿಪ್ರಾಯಪಟ್ಟ ಪೀಠ, ಮುಂದಿನ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿತು.

ರಾಷ್ಟ್ರ ರಾಜಧಾನಿಯಲ್ಲಿ ಸದ್ಯ ತಲೆದೋರಿರುವ ನೀರಿನ ಬಿಕ್ಕಟ್ಟನ್ನು ಬಗೆಹರಿಸಲು ಹಿಮಾಚಲ ಪ್ರದೇಶವು ರಾಷ್ಟ್ರ ರಾಜಧಾನಿಗೆ ಒದಗಿಸಿದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲು ಹರಿಯಾಣ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ದೆಹಲಿ ಸರ್ಕಾರ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಸುಪ್ರೀಂ ಕೋರ್ಟ್
ನೀರು ಪೋಲು ಮಾಡಿದರೆ 2 ಸಾವಿರ ರೂ. ದಂಡ: ದೆಹಲಿ ಸರ್ಕಾರ ಆದೇಶ

ಈ ಅರ್ಜಿಯಲ್ಲಿ ಕೇಂದ್ರ ಸರ್ಕಾರ, ಬಿಜೆಪಿ ಆಡಳಿತವಿರುವ ಹರಿಯಾಣ ಮತ್ತು ಕಾಂಗ್ರೆಸ್ ಆಡಳಿತದ ಹಿಮಾಚಲ ಪ್ರದೇಶವನ್ನು ಉಲ್ಲೇಖಿಸಿದ್ದು, ನೀರಿನ ಲಭ್ಯತೆಯು ಪ್ರತಿಯೊಬ್ಬರ ಉಳಿವಿಗಾಗಿ ಅತ್ಯಗತ್ಯ ಮತ್ತು ಮೂಲಭೂತ ಮಾನವ ಹಕ್ಕುಗಳಲ್ಲಿ ಒಂದಾಗಿದೆ ಎಂದು ಹೇಳಿದೆ.

ದೆಹಲಿಯ ರಾಷ್ಟ್ರ ರಾಜಧಾನಿ ಪ್ರದೇಶಕ್ಕೆ (ಎನ್‌ಸಿಟಿ) ಹಿಮಾಚಲ ಪ್ರದೇಶ ಒದಗಿಸಿದ ಸಂಪೂರ್ಣ ಹೆಚ್ಚುವರಿ ನೀರನ್ನು ವಜೀರಾಬಾದ್ ಬ್ಯಾರೇಜ್‌ನಲ್ಲಿ ತಕ್ಷಣ ಮತ್ತು ನಿರಂತರವಾಗಿ ನೀರನ್ನು ಬಿಡುಗಡೆ ಮಾಡಲು ಹರಿಯಾಣ ಸರ್ಕಾರಕ್ಕೆ ನಿರ್ದೇಶನವನ್ನು ಕೋರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com