ಕನಿಷ್ಠ 14 ಕೋಟಿ ಜನರು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಿಂದ ವಂಚಿತ; ಜನಗಣತಿ ಯಾವಾಗ?: ಪ್ರಧಾನಿಗೆ ಕಾಂಗ್ರೆಸ್ ಪ್ರಶ್ನೆ

ಕೇಂದ್ರ ಸರ್ಕಾರವು ಪ್ರತಿ 10 ವರ್ಷಗಳಿಗೊಮ್ಮೆ ಸಾಮಾಜಿಕ ಆರ್ಥಿಕ ಅಭಿವೃದ್ಧಿಗೆ ಅಗತ್ಯವಾದ ಸಮಗ್ರ ಜನಗಣತಿಯನ್ನು ನಡೆಸಬೇಕು ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ. ಕೊನೆಯ ಜನಗಣತಿ 2021 ರಲ್ಲಿ ಪೂರ್ಣಗೊಳ್ಳಬೇಕಿತ್ತು.
ಜೈರಾಮ್ ರಮೇಶ್
ಜೈರಾಮ್ ರಮೇಶ್
Updated on

ನವದೆಹಲಿ: ಜನಗಣತಿಯ ನವೀಕರಣ ಯಾವಾಗ ನಡೆಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ದೇಶದ ಜನತೆಗೆ ತಿಳಿಸಬೇಕು ಮತ್ತು ಸಾಮಾಜಿಕ ನ್ಯಾಯಕ್ಕೆ ನಿಜವಾದ ಅರ್ಥ ನೀಡಲು ಒಬಿಸಿ ಎಂದು ವರ್ಗೀಕರಿಸಲಾದ ಸಮುದಾಯಗಳ ಜನಸಂಖ್ಯೆಯ ಅಂಕಿಅಂಶಗಳನ್ನು ಸಹ ನೀಡಬೇಕು ಎಂದು ಕಾಂಗ್ರೆಸ್ ಸೋಮವಾರ ಒತ್ತಾಯಿಸಿದೆ.

ಕೇಂದ್ರ ಸರ್ಕಾರವು ಪ್ರತಿ 10 ವರ್ಷಗಳಿಗೊಮ್ಮೆ ಸಾಮಾಜಿಕ ಆರ್ಥಿಕ ಅಭಿವೃದ್ಧಿಗೆ ಅಗತ್ಯವಾದ ಸಮಗ್ರ ಜನಗಣತಿಯನ್ನು ನಡೆಸಬೇಕು ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ. ಕೊನೆಯ ಜನಗಣತಿ 2021 ರಲ್ಲಿ ಪೂರ್ಣಗೊಳ್ಳಬೇಕಿತ್ತು.

ಜೈರಾಮ್ ರಮೇಶ್
ಜಿ-20 ವಿದೇಶಾಂಗ ಸಚಿವರ ಸಭೆ: ಬಹುಪಕ್ಷೀಯತೆ, ಆಹಾರ, ಇಂಧನ ಭದ್ರತೆ ಕುರಿತ ಮೊದಲ ಅಧಿವೇಶನ ಆರಂಭ
ಜೈರಾಮ್ ರಮೇಶ್
ಭಾರತದ ಮುಂದಿನ ಜನಗಣತಿ ಪ್ರಕ್ರಿಯೆ ಡಿಜಿಟಲೀಕರಣ; ಆ್ಯಪ್ ಆಧಾರಿತ ಗಣತಿ: ಕೇಂದ್ರ

ಆದರೆ ಪ್ರಧಾನಿ ಮೋದಿಯವರು ಅದನ್ನು ಮಾಡಲಿಲ್ಲ. 2021 ರ ಜನಗಣತಿಯನ್ನು ನಡೆಸದಿರುವ ಪರಿಣಾಮವೆಂದರೆ ಕನಿಷ್ಠ 14 ಕೋಟಿ ಭಾರತೀಯರು ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ, 2013 ರ ಅಡಿಯಲ್ಲಿ ಪ್ರಯೋಜನಗಳಿಂದ ವಂಚಿತರಾಗುತ್ತಿದ್ದಾರೆ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಎಂದು ಮರು ಪ್ಯಾಕೇಜ್ ಮಾಡಲಾಗಿದೆ ಎಂದು ಹೇಳಿದರು.

1951 ರಿಂದ ದಶವಾರ್ಷಿಕ ಜನಗಣತಿಯು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಯ ದಾಖಲೆಗಳನ್ನು ಒದಗಿಸಿದೆ. ಜನಗಣತಿಯು ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಎಂದು ವರ್ಗೀಕರಿಸಲಾದ ಸಮುದಾಯಗಳ ಜನಸಂಖ್ಯೆಯ ಅಂಕಿಅಂಶ ಒದಗಿಸಬೇಕು ಎಂದರು.

ಕಾಂಗ್ರೆಸ್ ಈ ಬಾರಿಯ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ರಾಷ್ಟ್ರವ್ಯಾಪಿ ಜಾತಿ ಸಮೀಕ್ಷೆ ನಡೆಸುವುದಾಗಿ ಭರವಸೆ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com