ಭುವನೇಶ್ವರ್: ಒಡಿಶಾದ ಬಿಜೆಪಿ ಸರ್ಕಾರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪುರಿ ಜಗನ್ನಾಥ ದೇವಾಲಯಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ.
ಜಗನ್ನಾಥ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ಪುನಃ ತೆರೆಯುವ ನಿರ್ಧಾರ ಇದಾಗಿದ್ದು, ಗುರುವಾರ ಬೆಳಿಗ್ಗೆಯಿಂದ ಜಾರಿಗೆ ಬಂದಿದೆ. ಇದಷ್ಟೇ ಅಲ್ಲದೇ ದೇವಾಲಯಕ್ಕೆ ಅಗತ್ಯವಿರುವ ಸಂಗ್ರಹ ನಿಧಿಯನ್ನು ಸ್ಥಾಪಿಸುವುದಕ್ಕೂ ಸಚಿವ ಸಂಪುಟ ಅನುಮೋದನೆ ನೀಡಿದೆ.
ಭಕ್ತಾದಿಗಳು ಇನ್ನು ಮುಂದೆ ಎಲ್ಲಾ ನಾಲ್ಕು ದ್ವಾರಗಳ ಮೂಲಕ ಪುರಿ ಜಗನ್ನಾಥನ ದರ್ಶನ ಪಡೆಯಬಹುದಾಗಿದೆ ಎಂದು ಸಿಎಂ ಮೋಹನ್ ಚರಣ್ ಮಾಜ್ಹಿ ಹೇಳಿದ್ದಾರೆ. ದೇವಾಲಯದ ನಾಲ್ಕೂ ದ್ವಾರಗಳನ್ನು ತೆರೆಯುವುದು ಬಿಜೆಪಿ ಪ್ರಣಾಳಿಕೆಯ ಅಂಶವಾಗಿತ್ತು. ಗೇಟ್ ಗಳನ್ನು ಮುಚ್ಚಿದ್ದರಿಂದ ಭಕ್ತಾದಿಗಳಿಗೆ ಅನನುಕೂಲವಾಗಿತ್ತು.
ಹಿಂದಿನ BJD ಆಡಳಿತವು COVID-19 ಸಾಂಕ್ರಾಮಿಕ ರೋಗದಿಂದ ದೇವಾಲಯದ ನಾಲ್ಕು ದ್ವಾರಗಳನ್ನು ಮುಚ್ಚುವುದನ್ನು ಮುಂದುವರೆಸಿತ್ತು. ಭಕ್ತರು ಒಂದು ಗೇಟ್ ಮೂಲಕ ಮಾತ್ರ ಪ್ರವೇಶಿಸಬಹುದಾಗಿತ್ತು. ಅನನುಕೂಲವಾಗುತ್ತಿದ್ದ ಕಾರಣ ಎಲ್ಲಾ ದ್ವಾರಗಳನ್ನು ತೆರೆಯಬೇಕು ಎಂಬ ಒತ್ತಾಯ ಕೇಳಿಬಂದಿತ್ತು.
Advertisement