ಮೊದಲ ಸಚಿವ ಸಂಪುಟ ಸಭೆಯಲ್ಲಿ ಪುರಿ ಜಗನ್ನಾಥ ದೇವಾಲಯದ ಕುರಿತು ಮಹತ್ವದ ನಿರ್ಧಾರ ಕೈಗೊಂಡ ಬಿಜೆಪಿ ಸರ್ಕಾರ!

ಒಡಿಶಾದ ಬಿಜೆಪಿ ಸರ್ಕಾರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪುರಿ ಜಗನ್ನಾಥ ದೇವಾಲಯಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ.
ಮೊದಲ ಸಚಿವ ಸಂಪುಟ ಸಭೆಯಲ್ಲಿ ಪುರಿ ಜಗನ್ನಾಥ ದೇವಾಲಯದ ಕುರಿತು ಮಹತ್ವದ ನಿರ್ಧಾರ ಕೈಗೊಂಡ ಬಿಜೆಪಿ ಸರ್ಕಾರ!
Updated on

ಭುವನೇಶ್ವರ್: ಒಡಿಶಾದ ಬಿಜೆಪಿ ಸರ್ಕಾರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪುರಿ ಜಗನ್ನಾಥ ದೇವಾಲಯಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ.

ಜಗನ್ನಾಥ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ಪುನಃ ತೆರೆಯುವ ನಿರ್ಧಾರ ಇದಾಗಿದ್ದು, ಗುರುವಾರ ಬೆಳಿಗ್ಗೆಯಿಂದ ಜಾರಿಗೆ ಬಂದಿದೆ. ಇದಷ್ಟೇ ಅಲ್ಲದೇ ದೇವಾಲಯಕ್ಕೆ ಅಗತ್ಯವಿರುವ ಸಂಗ್ರಹ ನಿಧಿಯನ್ನು ಸ್ಥಾಪಿಸುವುದಕ್ಕೂ ಸಚಿವ ಸಂಪುಟ ಅನುಮೋದನೆ ನೀಡಿದೆ.

ಭಕ್ತಾದಿಗಳು ಇನ್ನು ಮುಂದೆ ಎಲ್ಲಾ ನಾಲ್ಕು ದ್ವಾರಗಳ ಮೂಲಕ ಪುರಿ ಜಗನ್ನಾಥನ ದರ್ಶನ ಪಡೆಯಬಹುದಾಗಿದೆ ಎಂದು ಸಿಎಂ ಮೋಹನ್ ಚರಣ್ ಮಾಜ್ಹಿ ಹೇಳಿದ್ದಾರೆ. ದೇವಾಲಯದ ನಾಲ್ಕೂ ದ್ವಾರಗಳನ್ನು ತೆರೆಯುವುದು ಬಿಜೆಪಿ ಪ್ರಣಾಳಿಕೆಯ ಅಂಶವಾಗಿತ್ತು. ಗೇಟ್ ಗಳನ್ನು ಮುಚ್ಚಿದ್ದರಿಂದ ಭಕ್ತಾದಿಗಳಿಗೆ ಅನನುಕೂಲವಾಗಿತ್ತು.

ಮೊದಲ ಸಚಿವ ಸಂಪುಟ ಸಭೆಯಲ್ಲಿ ಪುರಿ ಜಗನ್ನಾಥ ದೇವಾಲಯದ ಕುರಿತು ಮಹತ್ವದ ನಿರ್ಧಾರ ಕೈಗೊಂಡ ಬಿಜೆಪಿ ಸರ್ಕಾರ!
ಕೊಟ್ಟ ಭರವಸೆ ಈಡೇರಿಸಿದ ಬಿಜೆಪಿ: ಪುರಿ ಜಗನ್ನಾಥ ದೇಗುಲದ ಎಲ್ಲಾ ನಾಲ್ಕು ಗೇಟ್ ಗಳು ಪ್ರವೇಶಕ್ಕೆ ಮುಕ್ತ

ಹಿಂದಿನ BJD ಆಡಳಿತವು COVID-19 ಸಾಂಕ್ರಾಮಿಕ ರೋಗದಿಂದ ದೇವಾಲಯದ ನಾಲ್ಕು ದ್ವಾರಗಳನ್ನು ಮುಚ್ಚುವುದನ್ನು ಮುಂದುವರೆಸಿತ್ತು. ಭಕ್ತರು ಒಂದು ಗೇಟ್ ಮೂಲಕ ಮಾತ್ರ ಪ್ರವೇಶಿಸಬಹುದಾಗಿತ್ತು. ಅನನುಕೂಲವಾಗುತ್ತಿದ್ದ ಕಾರಣ ಎಲ್ಲಾ ದ್ವಾರಗಳನ್ನು ತೆರೆಯಬೇಕು ಎಂಬ ಒತ್ತಾಯ ಕೇಳಿಬಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com