ಕುತೂಹಲ ಮೂಡಿಸಿದ ಆರ್ ಎಸ್ಎಸ್ ಮುಖ್ಯಸ್ಥ- ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭೇಟಿ!

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಇಂದು ಗೋರಖ್ ಪುರದಲ್ಲಿ ಭೇಟಿಯಾಗಲಿದ್ದಾರೆ.
RSS leader Mohan bhagwat-UP CM Yogi Adityanath
ಆರ್ ಎಸ್ಎಸ್ ಮುಖಂಡ ಮೋಹನ್ ಭಾಗ್ವತ್- ಯೋಗಿ ಆದಿತ್ಯನಾಥ್ online desk
Updated on

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಇಂದು ಗೋರಖ್ ಪುರದಲ್ಲಿ ಭೇಟಿಯಾಗಲಿದ್ದಾರೆ.

ಲೋಕಸಭಾ ಚುನಾವಣೆ-2024 ರ ಫಲಿತಾಂಶದಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಅತ್ಯಂತ ಕಡಿಮೆ ಸ್ಥಾನಗಳನ್ನು ಪಡೆದಿತ್ತು. ಪರಿಣಾಮ ಕೇಂದ್ರದಲ್ಲಿ ಸರ್ಕಾರ ರಚನೆಗೆ ಅಗತ್ಯವಾದ ಬಹುಮತವನ್ನು ಏಕಾಂಗಿಯಾಗಿ ಪಡೆಯಲು ಬಿಜೆಪಿಗೆ ಸಾಧ್ಯವಾಗಿರಲಿಲ್ಲ.

RSS leader Mohan bhagwat-UP CM Yogi Adityanath
ದುರಹಂಕಾರ ಪಟ್ಟವರನ್ನು ಶ್ರೀರಾಮನೇ 240 ಸೀಟುಗಳಿಗೆ ತಡೆದ: RSS ನಾಯಕ ಇಂದ್ರೇಶ್ ಕುಮಾರ್ ವಾಗ್ದಾಳಿ

ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಆರ್ ಎಸ್ಎಸ್-ಬಿಜೆಪಿ ನಡುವೆ ಸಮನ್ವಯದ ಕೊರತೆ ಇದ್ದು, ಬಿಜೆಪಿಯ ಸೈದ್ಧಾಂತಿಕ ಮಾತೃಸಂಸ್ಥೆ ಆರ್ ಎಸ್ಎಸ್ ಕೇಂದ್ರ ಬಿಜೆಪಿಯ ನಾಯಕರು ಈ ಬಾರಿಯ ಚುನಾವಣೆ ನಡೆಸಿದ್ದ ರೀತಿಯ ಬಗ್ಗೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತ್ತು. ಕೆಲವು ದಿನಗಳ ಹಿಂದೆ ಆರ್ ಎಸ್ ಎಸ್ ನಾಯಕರು ಬಿಜೆಪಿ ಹೈಕಮಾಂಡ್ ನಾಯಕರ ವಿರುದ್ಧವೂ ಹೇಳಿಕೆ ನೀಡಿದ್ದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್- ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಭೇಟಿಯಾಗುತ್ತಿರುವುದು ಕುತೂಹಲ ಮೂಡಿಸಿದೆ. ಸಿಎಂ ಪ್ರತಿನಿಧಿಸುವ ಕ್ಷೇತ್ರದಲ್ಲಿ ಆರ್ ಎಸ್ಎಸ್ ಕಾರ್ಯಕ್ರಮ ನಡೆಯುತ್ತಿದೆ ಆದ್ದರಿಂದ ಸಿಎಂ- ಆರ್ ಎಸ್ಎಸ್ ಮುಖ್ಯಸ್ಥರದ್ದು ಸೌಜನ್ಯ ಭೇಟಿ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com