ಮುಂಗಾರು ಅಧಿವೇಶನ ನಂತರ ಅಜಿತ್ ಬಣದ 18-19 ಶಾಸಕರು ಪಕ್ಷಾಂತರ: ರೋಹಿತ್ ಪವಾರ್

ಮುಂಬರುವ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದ ನಂತರ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಆಡಳಿತಾರೂಢ ಎನ್‌ಸಿಪಿಯ 18 ​​ರಿಂದ 19 ಶಾಸಕರು ತಮ್ಮ ಪಕ್ಷವನ್ನು ಸೇರಲಿದ್ದಾರೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎಸ್‌ಪಿ) ನಾಯಕ ರೋಹಿತ್ ಪವಾರ್ ಸೋಮವಾರ ಹೇಳಿದ್ದಾರೆ.
ಎನ್ ಸಿಪಿ ಶಾಸಕ ರೋಹಿತ್ ಪವಾರ್
ಎನ್ ಸಿಪಿ ಶಾಸಕ ರೋಹಿತ್ ಪವಾರ್
Updated on

ಮುಂಬೈ: ಮುಂಬರುವ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದ ನಂತರ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಆಡಳಿತಾರೂಢ ಎನ್‌ಸಿಪಿಯ 18 ​​ರಿಂದ 19 ಶಾಸಕರು ತಮ್ಮ ಪಕ್ಷವನ್ನು ಸೇರಲಿದ್ದಾರೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎಸ್‌ಪಿ) ನಾಯಕ ರೋಹಿತ್ ಪವಾರ್ ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರೋಹಿತ್ ಪವಾರ್, ಜುಲೈ 2023 ರಲ್ಲಿ ಪಕ್ಷ ವಿಭಜನೆಯಾದ ನಂತರ ಪಕ್ಷದ ಸಂಸ್ಥಾಪಕ ಶರದ್ ಪವಾರ್ ಮತ್ತು ಇತರ ಹಿರಿಯ ನಾಯಕರ ವಿರುದ್ಧ ಎಂದಿಗೂ ಕೆಟ್ಟದಾಗಿ ಮಾತನಾಡದ ಹಲವಾರು ಎನ್‌ಸಿಪಿ ಶಾಸಕರಿದ್ದಾರೆ. "ಆದರೆ ಅವರು ಶಾಸಕಾಂಗ ಅಧಿವೇಶನಕ್ಕೆ ಹಾಜರಾಗಬೇಕು ಮತ್ತು ತಮ್ಮ ಕ್ಷೇತ್ರಗಳಿಗೆ ಅಭಿವೃದ್ಧಿ ಹಣವನ್ನು ಪಡೆಯಬೇಕು. ಆದ್ದರಿಂದ ಅವರು ಅಧಿವೇಶನ ಮುಗಿಯುವವರೆಗೆ ಕಾಯುತ್ತಾರೆ" ಎಂದು ಹೇಳಿದರು.

ಎನ್ ಸಿಪಿ ಶಾಸಕ ರೋಹಿತ್ ಪವಾರ್
ಲೋಕಸಭೆ ಚುನಾವಣೆ ಗೆಲುವು ಅಂತ್ಯವಲ್ಲ, ಆರಂಭ ಎಂದ ಉದ್ಧವ್; ಮೋದಿಗೆ ಧನ್ಯವಾದ ಹೇಳಿದ ಶರದ್ ಪವಾರ್

ಪವಾರ್ ಸಾಹೇಬ್ ಅವರೊಂದಿಗೆ 18 ರಿಂದ 19 (ಎನ್‌ಸಿಪಿ) ಶಾಸಕರು ಸಂಪರ್ಕದಲ್ಲಿದ್ದಾರೆ ಮತ್ತು ಅವರು ಮುಂಗಾರು ಅಧಿವೇಶನದ ನಂತರ ಅವರು ಪಕ್ಷದಿಂದ ಹೊರಗೆ ಹೋಗಲಿದ್ದಾರೆ. ಶರದ್ ಪವಾರ್ ಮತ್ತು ಇತರ ಎನ್‌ಸಿಪಿ (ಎಸ್‌ಪಿ) ನಾಯಕರು ಯಾರನ್ನು ಮರಳಿ ತೆಕ್ಕೆಗೆ ತೆಗೆದುಕೊಳ್ಳಬೇಕು ಎಂಬುದರ ಕುರಿತು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಅಹ್ಮದ್‌ನಗರ ಜಿಲ್ಲೆಯ ಕರ್ಜತ್-ಜಮಖೇಡ್‌ನ ಶಾಸಕ ಹೇಳಿದರು.

2019 ರ ಚುನಾವಣೆಯಲ್ಲಿ ಅವಿಭಜಿತ ಎನ್‌ಸಿಪಿ 54 ವಿಧಾನಸಭಾ ಸ್ಥಾನಗಳನ್ನು ಗೆದ್ದಿತ್ತು. ಜುಲೈ 2023 ರಲ್ಲಿ ಪಕ್ಷವು ವಿಭಜನೆಯಾದಾಗ, ಅಜಿತ್ ಪವಾರ್ ನೇತೃತ್ವದ ಬಣವು ಸುಮಾರು 40 ಶಾಸಕರ ಬೆಂಬಲ ಇರುವುದಾಗಿ ಹೇಳಿಕೊಂಡಿತ್ತು.

ವಿಧಾನಮಂಡಲದ ಮುಂಗಾರು ಅಧಿವೇಶನ ಜೂನ್ 27 ರಂದು ಪ್ರಾರಂಭವಾಗಿ ಜುಲೈ 12 ರಂದು ಕೊನೆಗೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com