ರಾಹುಲ್ ಗಾಂಧಿ ಲೋಕಸಭಾ ಸ್ಥಾನ, ಪ್ರತಿಪಕ್ಷ ನಾಯಕನ ಸ್ಥಾನದ ಬಗ್ಗೆ ಕಾಂಗ್ರೆಸ್ ವರಿಷ್ಠರ ಚರ್ಚೆ

ರಾಹುಲ್ ಗಾಂಧಿ ಅವರು ತಮ್ಮ ವಯನಾಡ್ ಅಥವಾ ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಬೇಕೇ ಎಂದು ನಿರ್ಧರಿಸಲು ಕಾಂಗ್ರೆಸ್ ಉನ್ನತ ನಾಯಕತ್ವವು ಸೋಮವಾರ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ನಡೆಸಿತು.
ರಾಹುಲ್ ಗಾಂಧಿ
ರಾಹುಲ್ ಗಾಂಧಿPTI
Updated on

ನವದೆಹಲಿ: ರಾಹುಲ್ ಗಾಂಧಿ ಅವರು ತಮ್ಮ ವಯನಾಡ್ ಅಥವಾ ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಬೇಕೇ ಎಂದು ನಿರ್ಧರಿಸಲು ಕಾಂಗ್ರೆಸ್ ಉನ್ನತ ನಾಯಕತ್ವವು ಸೋಮವಾರ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ನಡೆಸಿತು.

ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ರಾಹುಲ್ ಗಾಂಧಿ ವಹಿಸಿಕೊಳ್ಳುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಚರ್ಚೆಯಲ್ಲಿ ಭಾಗವಹಿಸಿದ್ದರು.

ರಾಹುಲ್ ಗಾಂಧಿ
ವಯನಾಡು ಲೋಕಸಭೆ ಕ್ಷೇತ್ರಕ್ಕೆ ರಾಹುಲ್ ಗಾಂಧಿ ರಾಜಿನಾಮೆ: ಉಪ ಚುನಾವಣೆಯಲ್ಲಿ ಪ್ರಿಯಾಂಕಾ ಸ್ಪರ್ಧೆ?

ರಾಹುಲ್ ಗಾಂಧಿ ಯಾವ ಕ್ಷೇತ್ರವನ್ನು ತೆರವು ಮಾಡಬೇಕು ಅಥವಾ ಉಳಿಸಿಕೊಳ್ಳಬೇಕು ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳಬೇಕೇ ಎಂಬ ಬಗ್ಗೆ ನಾಯಕರು ನಿರ್ಣಾಯಕ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿ ಅವರು ವಯನಾಡ್ ಮತ್ತು ರಾಯ್ ಬರೇಲಿ ಲೋಕಸಭಾ ಕ್ಷೇತ್ರ ಎರಡೂ ಕಡೆ ಗೆದ್ದಿದ್ದಾರೆ ಮತ್ತು ಜೂನ್ 4 ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ 14 ದಿನಗಳಲ್ಲಿ ಅವರು ಒಂದು ಸ್ಥಾನವನ್ನು ತೆರವು ಮಾಡಬೇಕಾಗಿದೆ.

ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ, ರಾಹುಲ್ ಗಾಂಧಿಯನ್ನು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳುವಂತೆ ನಿರ್ಣಯ ಅಂಗೀಕರಿಸಿದೆ.

ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ರಾಹುಲ್ ಗಾಂಧಿ "ಅವರು ಉತ್ತಮ ವ್ಯಕ್ತಿ"ಯಾಗಿದ್ದು, ಆ ಸ್ಥಾನವನ್ನು ಅವರು ವಹಿಸಿಕೊಳ್ಳಬೇಕು ಎಂದು ಸಿಡಬ್ಲ್ಯುಸಿ ಒತ್ತಾಯಿಸಿರುವುದಾಗಿ ಕಾಂಗ್ರೆಸ್ ಹಿರಿಯ ನಾಯಕ ಕೆಸಿ ವೇಣುಗೋಪಾಲ್ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com