ಕೇರಳ: ಕಣ್ಣೂರಿನಲ್ಲಿ ಬಾಂಬ್ ಸ್ಫೋಟ, ಓರ್ವ ವ್ಯಕ್ತಿ ಸಾವು

ಉತ್ತರ ಕೇರಳ ಜಿಲ್ಲೆಯ ತಲಶ್ಶೇರಿ ಬಳಿ ಮಂಗಳವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 86 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತನನ್ನು ವೆಲಾಯುಧನ್ ಎಂದು ಗುರುತಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕಣ್ಣೂರು: ಉತ್ತರ ಕೇರಳ ಜಿಲ್ಲೆಯ ತಲಶ್ಶೇರಿ ಬಳಿ ಮಂಗಳವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 86 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತನನ್ನು ವೆಲಾಯುಧನ್ ಎಂದು ಗುರುತಿಸಲಾಗಿದೆ.

ಜನವಸತಿ ಪ್ರದೇಶದಲ್ಲಿ ಬಿದ್ದಿದ್ದ ತೆಂಗಿನ ಕಾಯಿ ಸಂಗ್ರಹಿಸಲು ಹೋಗಿದ್ದ ವೇಳೆ ಪತ್ತೆಯಾದ ಬಾಂಬ್ ನ್ನು ಎತ್ತಿಕೊಂಡು ಅದನ್ನು ತೆರೆಯಲು ಪ್ರಯತ್ನಿಸಿದಾಗ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವೇಲಾಯುಧನ್ ಅವರನ್ನು ತಲಶ್ಶೇರಿ ಸಹಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ ಇದು ಸ್ಟೀಲ್ ಬಾಂಬ್ ಎಂದು ಕಂಡುಬಂದಿದೆ ಎಂದು ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಗಾರರಿಗೆ ತಿಳಿಸಿದರು.

ಸಾಂದರ್ಭಿಕ ಚಿತ್ರ
ಬೆಂಗಳೂರು ಏರ್ ಪೋರ್ಟ್: ಲಗೇಜ್ ನಲ್ಲಿ ಬಾಂಬ್ ಇದೆ ಎಂದು ವೃದ್ಧನ ಹುಸಿ ಹೇಳಿಕೆ; ವಿಮಾನ ಹತ್ತಲು ಬಿಡದ ಸಿಬ್ಬಂದಿ

ಮಧ್ಯಾಹ್ನ 12-45 ರ ಸುಮಾರಿನಲ್ಲಿ ಘಟನೆ ನಡೆದಿದ್ದು, ಬಾಂಬ್ ನ್ನು ಬಿಸಾಡಿರಬಹುದು ಅಥವಾ ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿರಬಹುದು. ಸ್ಫೋಟಕ ಪತ್ತೆಯಾದ ಪ್ರದೇಶದಲ್ಲಿ ಬಾಂಬ್ ನಿಷ್ಕ್ರೀಯ ದಳ ಎಚ್ಚರಿಕೆಯಿಂದ ಪರಿಶೀಲಿಸುತ್ತಿದೆ ಎಂದು ಅಧಿಕಾರಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com