ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರದ ಪ್ರತೀಕ 'ಸೂರ್ಯ ಘರ್ 'ಯೋಜನೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರ ಪ್ರಧಾನಿ ಆಶಯವಾಗಿದ್ದು, ಸೂರ್ಯ ಘರ್ ಯೋಜನೆ ಇದಕ್ಕೆ ಪ್ರತೀಕವಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರದ ಪ್ರತೀಕ 'ಸೂರ್ಯ ಘರ್ 'ಯೋಜನೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
Updated on

ನವದೆಹಲಿ: ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರ ಪ್ರಧಾನಿ ಆಶಯವಾಗಿದ್ದು, ಸೂರ್ಯ ಘರ್ ಯೋಜನೆ ಇದಕ್ಕೆ ಪ್ರತೀಕವಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ನವದೆಹಲಿಯಲ್ಲಿ ಮಂಗಳವಾರ ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಕಾರ್ಯದರ್ಶಿ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನೆ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಈ ನೂತನ ಸೂರ್ಯ ಘರ್ ಯೋಜನೆಯಡಿ ದೇಶಾದ್ಯಂತ 1 ಕೋಟಿ ಗ್ರಾಹಕರು 300 ಯೂನಿಟ್ ಉಚಿತ ವಿದ್ಯುತ್ ಪಡೆಯಲು ಅವಕಾಶವಿದೆ ಎಂದು ತಿಳಿಸಿದರು.

ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರದ ಪ್ರತೀಕ 'ಸೂರ್ಯ ಘರ್ 'ಯೋಜನೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಲೋಕಸಭೆ ಚುನಾವಣೆಯಲ್ಲಿ ಜನ ತಿರಸ್ಕರಿಸಿದ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಸೇಡು ತೀರಿಸಿಕೊಳ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ದೇಶದ ನಾನಾ ರಾಜ್ಯಗಳು, ವಿತರಕ ಘಟಕಗಳು ಮತ್ತು ನಾಗರಿಕರು ಈ ಯೋಜನೆಯ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳುವಂತೆ ಪ್ರೇರೇಪಿಸಬೇಕು ಎಂದು ಈ ಮಹತ್ವದ ಸಭೆಯಲ್ಲಿ ಸಚಿವ ಜೋಶಿ ಮಾರ್ಗದರ್ಶನ ನೀಡಿದರು.

ಸೂರ್ಯ ಘರ್ ಮೂಲಕ ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರ ಸಾಧಿಸುವುದು ಭಾರತದ ಆಶಯವಾಗಿದ್ದು, ಇದು ಹಸಿರು ಹಾಗೂ ಹೆಚ್ಚು ಸುಸ್ಥಿರ ಭವಿಷ್ಯಕ್ಕೆ ಸುಗಮ ದಾರಿಯಾಗಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com