ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಜುಲೈ 3 ರವರೆಗೆ ವಿಸ್ತರಿಸಿದ ಕೋರ್ಟ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯವು ಜುಲೈ 3 ರವರೆಗೆ ವಿಸ್ತರಿಸಿದೆ.
Aravind Kejriwal
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್TNIE
Updated on

ನವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯವು ಜುಲೈ 3 ರವರೆಗೆ ವಿಸ್ತರಿಸಿದೆ.

ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ನಿಯಾಯ್ ಬಿಂದು ಅವರು ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದರು.

ವಿಚಾರಣೆ ವೇಳೆ ಕೇಜ್ರಿವಾಲ್ ಪರ ವಾದ ಮಂಡಿಸಿದ ವಕೀಲರು, ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸುವಂತೆ ಇಡಿ ಸಲ್ಲಿಸಿದ್ದ ಅರ್ಜಿಯನ್ನು ವಿರೋಧಿಸಿದರು ಮತ್ತು ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಸಮರ್ಥಿಸುವ ಯಾವುದೇ ಆಧಾರಗಳಿಲ್ಲ ಎಂದು ಹೇಳಿದರು.

Aravind Kejriwal
ಅರವಿಂದ್ ಕೇಜ್ರಿವಾಲ್ ಗೆ ಸಿಗದ ರಿಲೀಫ್: ಜೂನ್ 19ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಮಾರ್ಚ್ 21ರಂದು ಇಡಿ ಬಂಧಿಸಿತ್ತು. ಚುನಾವಣಾ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2 ರಂದು ಅವರು ಮತ್ತೆ ಶರಣಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com